April 26, 2024

Bhavana Tv

Its Your Channel

ಅಂಗನವಾಡಿ ಕೇಂದ್ರದಲ್ಲಿ ವಿಶ್ವಪರಿಸರ ದಿನಾಚರಣೆ

ಕೃಷ್ಣರಾಜಪೇಟೆ ವರದಿ ; ಕೆ.ಆರ್.ಪೇಟೆ ಪುರಸಭೆ ವ್ಯಾಪ್ತಿಯ ಹೊಸಹೊಳಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ವಿವಿಧ ಹೂವು ಹಣ್ಣಿನ ಸಸಿಗಳನ್ನು ನೆಟ್ಟು ನೀರೆರೆಯಲಾಯಿತು.

ಕೆ.ಆರ್.ಪೇಟೆ ಸಿಡಿಪಿಓ ಕಛೇರಿಯ ಮೇಲ್ವಿಚಾರಕಿ ಶಾಂತವ್ವ ಅವರ ಮೊಮ್ಮಗಳು ಪುಟಾಣಿ ರಕ್ಷಾ ಹುಟ್ಟು ಹಬ್ಬದ ಅಂಗವಾಗಿ ಪುರಸಭಾ ಉಪಾಧ್ಯಕ್ಷೆ ಗಾಯತ್ರಿ ಸಸಿಗಳನ್ನು ವಿತರಿಸಿದರು.
ವಿಶ್ವಪರಿಸರ ದಿನಾಚರಣೆ ಕುರಿತು ಮಾತನಾಡಿದ ಪುರಸಭೆ ಉಪಾಧ್ಯಕ್ಷೆ ಗಾಯತ್ರಿ ಪ್ರತಿಯೊಬ್ಬರೂ ಪರಿಸರ ಪ್ರೇಮವನ್ನು ಬೆಳೆಸಿಕೊಂಡು ಗಿಡಮರಗಳನ್ನು ನೆಟ್ಟು ಬೆಳೆಸುವ ಸಂಕಲ್ಪ ಮಾಡಬೇಕು. ಗಿಡಗಳನ್ನು ಮಕ್ಕಳಂತೆ ಪ್ರೀತಿಯಿಂದ ಬೆಳೆಸಿ ಪರಿಸರಕ್ಕೆ ತಮ್ಮ ಅಮೂಲ್ಯವಾದ ಕಾಣಿಕೆ ನೀಡಬೇಕು ಎಂದು ಗಾಯತ್ರಿ ಮನವಿ ಮಾಡಿದರು.
ತಾಲೂಕು ಆಯುಷ್ ಆರೋಗ್ಯಾಧಿಕಾರಿ ಡಾ.ಲೋಕೇಶ್, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಾಂತವ್ವ, ಹಿರಿಯ ಆರೋಗ್ಯ ಸಹಾಯಕಿ ಮಮತಾ ಮತ್ತು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸದಸ್ಯೆಯರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ

error: