ಕೆ.ಆರ್.ಪೇಟೆ ; ತಾಲೂಕಿನ ಬಡಜನರು, ಶೋಷಿತರು ಸೇರಿದಂತೆ ವಿವಿಧ ವರ್ಗಗಳ ಜನರಿಗೆ ತಾಲೂಕು ಬಿಜೆಪಿ ವತಿಯಿಂದ ಫುಡ್ ಕಿಟ್ ಗಳನ್ನು ವಿತರಿಸಿ, ಬಿಜೆಪಿ ಮಂಡಲ ಅಧ್ಯಕ್ಷ ಪರಮೇಶ್ ಅರವಿಂದ್ ವಿತರಿಸಿದರು .
ಕೋವಿಡ್ ಲಾಕ್ ಡೌನ್ ಸಂಕಷ್ಠದ ಹಿನ್ನೆಲೆಯಲ್ಲಿ ದುಡಿಯುವ ಕೈಗಳಿಗೆ ಕೆಲಸವಿಲ್ಲದೇ ನೊಂದಿರುವ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಕ್ಷೇತ್ರದ ಶಾಸಕರು ಹಾಗೂ ರಾಜ್ಯದ ಯುವಜನ ಸೇವೆ, ಕ್ರೀಡೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಕೊಡುಗೆಯಾಗಿ ನೀಡಿರುವ ೧೦ ಸಾವಿರ ಫುಡ್ ಕಿಟ್ ಗಳನ್ನು ತಾಲ್ಲೂಕಿನಾಧ್ಯಂತ ವಿತರಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಬದ್ಧತೆಯಿಂದ ಮಾಡುತ್ತಿದ್ದಾರೆ.
ಕೋವಿಡ್ ಸಂಕಷ್ಠದ ಸಮಯದಲ್ಲಿ ದುಡಿಯುವ ವರ್ಗದ ಜನರು ನೆಮ್ಮದಿಯ ಜೀವನ ನಡೆಸಬೇಕು ಎನ್ನುವುದು ಭಾರತೀಯ ಜನತಾ ಪಕ್ಷದ ಆಶಯವಾಗಿದೆ ಎಂದು ಪರಮೇಶ್ ಅರವಿಂದ್ ಹೇಳಿದರು.
ಕಳೆದ ಎರಡು ತಿಂಗಳಿನಿAದ ದುಡಿಯುವ ಕೈಗಳಿಗೆ ಕೆಲಸವಿಲ್ಲದೇ ತೊಂದರೆ ಅನುಭವಿಸುತ್ತಿರುವ ತಾಲೂಕು ನಯನಜ ಕ್ಷತ್ರಿಯ ಸಮಾಜದ ೩೦೦ ಕುಟುಂಬಗಳಿಗೆ ಬಿಜೆಪಿ ಪಕ್ಷದ ವತಿಯಿಂದ ಫುಡ್ ಕಿಟ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಮೋದೂರು ಮಂಜುನಾಥ್, ಸಿದ್ಧರಾಜು, ಚೋಕನಹಳ್ಳಿ ಪ್ರಕಾಶ್, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಲತಾಮುರಳಿ, ನಗರ ಬಿಜೆಪಿ ಮಹಿಳಾಧ್ಯಕ್ಷೆ ಚಂದ್ರಕಲಾ ರಮೇಶ್, ಉಧ್ಯಮಿ ಸಂತೋಷ್, ಮಂಜುನಾಥಗೌಡ ಮತ್ತಿತರರು ಉಪಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ . ಮಂಡ್ಯ
More Stories
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ
ದೇವಿರಮ್ಮಣ್ಣೆ ಕೆರೆ ಅಂಗಳಕ್ಕೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಬಾಂಧವರು
ಕಾರ್ಯಸಿದ್ಧಿ ಆಂಜನೇಯ ಸ್ವಾಮಿಯವರಿಗೆ ವಿಶೇಷ ಪೂಜೆ