April 29, 2024

Bhavana Tv

Its Your Channel

ಟ್ಯಾಬ್ಲೆಟ್ ಪಿಸಿ ವಿತರಣೆಗೆ ಚಾಲನೆ ನೀಡಿದ ಸಚಿವ ಡಾ.ನಾರಾಯಣಗೌಡ

ಕೃಷ್ಣರಾಜಪೇಟೆ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಟ್ಯಾಬ್ಲೆಟ್ ಪಿಸಿ ವಿತರಣೆಗೆ ಚಾಲನೆ ನೀಡಿದ ರಾಜ್ಯದ ಯುವಜನಸೇವೆ ಕ್ರೀಡೆ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ..

ಆನ್ ಲೈನ್ ಕೋಚಿಂಗ್ ಕ್ಲಾಸ್ ಸೇರಿದಂತೆ ವಿಜ್ಞಾನ ತಂತ್ರಜ್ಞಾನ ಮಾಹಿತಿಗೆ ಟ್ಯಾಬ್ಲೆಟ್ ವರದಾನವಾಗಿದೆ. ಜೋಪಾನವಾಗಿ ಇಟ್ಟುಕೊಂಡು ಬಳಕೆ ಮಾಡಿ, ವೈಜ್ಞಾನಿಕ ಮಾಹಿತಿ ಪಡೆದುಕೊಂಡು ವಿಜ್ಞಾನ ಆವಿಷ್ಕಾರ ಮಾಡಿ ಸಾಧನೆ ಮಾಡಲು ವಿದ್ಯಾರ್ಥಿನಿಯರಿಗೆ ಮನವಿ ಮಾಡಿದರು, ರಾಜ್ಯ ಸರ್ಕಾರವು ಉತ್ತಮ ಗುಣಮಟ್ಟದ ಟ್ಯಾಬ್ಲೆಟ್ ನೀಡಿದೆ. ವೈಜ್ಞಾನಿಕ ಮನೋಭಾವದಿಂದ ಸಾಧನೆ ಮಾಡಿ, ಕಾಲೇಜಿನ ಕೀರ್ತಿ ಬೆಳಗಿ ಎಂದು ಸಚಿವ ಡಾ.ನಾರಾಯಣಗೌಡ ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಸಿ.ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಜೆ.ವಿಜಯಕುಮಾರ್, ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಬಳ್ಳೇಕೆರೆ ಮಂಜುನಾಥ್, ಪಿ.ಧನಂಜಯ ಮತ್ತಿತರರು ಉಪಸ್ಥಿತರಿದ್ದರು.
ಕೆ.ಆರ್.ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿಯೂ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ಸಚಿವ ಡಾ.ನಾರಾಯಣಗೌಡ ವಿತರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಹೇಮಲತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ . ಕೃಷ್ಣರಾಜಪೇಟೆ . ಮಂಡ್ಯ

error: