May 15, 2024

Bhavana Tv

Its Your Channel

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೆಂಪಲ್ ರನ್

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತವರು ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಪುತ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೆಂಪಲ್ ರನ್, ಮುಖ್ಯಮಂತ್ರಿ ಕುರ್ಚಿಯ ಉಳಿವಿಗಾಗಿ ದೇವರ ಮೊರೆ ಹೋದ ವಿಜಯೇಂದ್ರ.

ಕೆ.ಆರ್.ಪೇಟೆ ತಾಲ್ಲೂಕಿನ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ ನಾಡಿನ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಸುಪುತ್ರ ಬಿ.ವೈ.ವಿಜಯೇಂದ್ರ ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರನ್ನು ದೂರವಿಟ್ಟು ಟೆಂಪಲ್ ರನ್ ನಡೆಸಿದರು..
ಮುಖ್ಯಮಂತ್ರಿ ಬದಲಾವಣೆಯ ಗದ್ದಲವು ದೂರಾಗಿ ಉಳಿದ ಎರಡು ವರ್ಷಗಳ ಅವಧಿಗೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಗಳಾಗಿ ಅಧಿಕಾರ ನಡೆಸಿ ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸುವ ಶಕ್ತಿಯನ್ನು ನೀಡುವಂತೆ ಭಗವಂತನ ಮೊರೆಹೋಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ವಿಜಯೇಂದ್ರ ಸಧ್ಯದಲ್ಲಿಯೇ ಎಲ್ಲಾ ಗೊಂದಲಗಳು ಸುಖಾಂತ್ಯಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು. ಭೂವರಹನಾಥಸ್ವಾಮಿಗೆ ಅಲಂಕರಿಸಿದ್ದ ಹೂವಿನಲ್ಲಿ ಸ್ವಾಮಿಯು ಬಲಗಡೆಯ ಪ್ರಸಾದ ಕರುಣಿಸಿದ್ದಾನೆ..ಉಳಿದಿರುವ ಎರಡು ವರ್ಷಗಳ ಅವಧಿಗೆ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಭೂವರಹನಾಥ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮ್ಯಾನೇಜಿಂಗ್ ಟ್ರಸ್ಟಿ ಶ್ರೀನಿವಾಸರಾಘವನ್ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರ ಟೆಂಪಲ್ ರನ್ ಕಾರ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೋದರಳಿಯಂದಿರಾದ ಎಸ್.ಸಿ.ಅಶೋಕ್, ಎಸ್.ಸಿ.ಅರವಿಂದ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಮುಖ್ಯಮಂತ್ರಿ ಯಡಿಯೂರಪ್ಪ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಬೂಕನಕೆರೆ ಮಧುಸೂದನ್, ಡಿಸಿಸಿ ಬ್ಯಾಂಕ್ ಮಾಜಿನಿರ್ದೇಶಕ ತೋಟಪ್ಪಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ. ಮಂಡ್ಯ

error: