May 16, 2024

Bhavana Tv

Its Your Channel

ಕಲ್ಪತರು ಪ್ರಥಮದರ್ಜೆ ಕಾಲೇಜಿನಲ್ಲಿ ಕೋವಿಶೀಲ್ಡ್ ಲಸಿಕಾ ಅಭಿಯಾನಕ್ಕೆ ಚಾಲನೆ..

ಕೆ.ಆರ್.ಪೇಟೆ ಪಟ್ಟಣದ ಕಲ್ಪತರು ಪ್ರಥಮದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಕಾಲೇಜಿನ ಅಧ್ಯಕ್ಷ ವಿಠಲಾಪುರ ಜಯರಾಂ ..

ಬಿಎ, ಬಿಕಾಂ, ಬಿಬಿಎಂ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕೋವಿಶೀಲ್ಡ್ ಲಸಿಕೆಯನ್ನು ಹಾಕುವ ಕಾರ್ಯಕ್ಕೆ ವೈದ್ಯೆ ಡಾ.ಅರ್ಚನಾ ಚಾಲನೆ ನೀಡಿ ವಿದ್ಯಾರ್ಥಿಗಳು ಯಾವುದೇ ಅಂಜಿಕೆಯಿಲ್ಲದೇ ಮುಕ್ತವಾಗಿ ಲಸಿಕೆಯನ್ನು ಹಾರಿಸಿಕೊಂಡು ಕೋವಿಡ್ ತಡೆ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು..ಕೋವಿಡ್ ವಿರುದ್ಧದ ಯುದ್ಧದಲ್ಲಿ ನಾವು ಗೆಲುವು ಸಾಧಿಸಬೇಕಾದರೆ ಕೋವಿಡ್ ನಿಯಮಗಳನ್ನು ಪಾಲಿಸುವ ಜೊತೆಗೆ ಕಡ್ಡಾಯವಾಗಿ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದುಕೊಳ್ಳಬೇಕು ಎಂದು ಡಾ.ಅರ್ಚನಾ ಮನವಿ ಮಾಡಿದರು.

ಕಲ್ಪತರು ಪ್ರಥಮದರ್ಜೆ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ವಿಠಲಾಪುರಜಯರಾಮು ಲಸಿಕಾ ಅಭಿಯಾನದಲ್ಲಿ ಭಾಗವಹಿಸಿ ಲಸಿಕೆಯನ್ನು ಹಾಕುವ ಕಾರ್ಯವನ್ನು ಯಶಸ್ವಿಗೊಳಿಸಿದ ವಿದ್ಯಾರ್ಥಿಗಳನ್ನು ಶ್ಲಾಘಿಸಿದರು.
ಲಸಿಕಾ ಅಭಿಯಾನದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: