ಕೆ.ಆರ್.ಪೇಟೆ ಪಟ್ಟಣದ ಕಲ್ಪತರು ಪ್ರಥಮದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಕಾಲೇಜಿನ ಅಧ್ಯಕ್ಷ ವಿಠಲಾಪುರ ಜಯರಾಂ ..
ಬಿಎ, ಬಿಕಾಂ, ಬಿಬಿಎಂ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕೋವಿಶೀಲ್ಡ್ ಲಸಿಕೆಯನ್ನು ಹಾಕುವ ಕಾರ್ಯಕ್ಕೆ ವೈದ್ಯೆ ಡಾ.ಅರ್ಚನಾ ಚಾಲನೆ ನೀಡಿ ವಿದ್ಯಾರ್ಥಿಗಳು ಯಾವುದೇ ಅಂಜಿಕೆಯಿಲ್ಲದೇ ಮುಕ್ತವಾಗಿ ಲಸಿಕೆಯನ್ನು ಹಾರಿಸಿಕೊಂಡು ಕೋವಿಡ್ ತಡೆ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು..ಕೋವಿಡ್ ವಿರುದ್ಧದ ಯುದ್ಧದಲ್ಲಿ ನಾವು ಗೆಲುವು ಸಾಧಿಸಬೇಕಾದರೆ ಕೋವಿಡ್ ನಿಯಮಗಳನ್ನು ಪಾಲಿಸುವ ಜೊತೆಗೆ ಕಡ್ಡಾಯವಾಗಿ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದುಕೊಳ್ಳಬೇಕು ಎಂದು ಡಾ.ಅರ್ಚನಾ ಮನವಿ ಮಾಡಿದರು.
ಕಲ್ಪತರು ಪ್ರಥಮದರ್ಜೆ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ವಿಠಲಾಪುರಜಯರಾಮು ಲಸಿಕಾ ಅಭಿಯಾನದಲ್ಲಿ ಭಾಗವಹಿಸಿ ಲಸಿಕೆಯನ್ನು ಹಾಕುವ ಕಾರ್ಯವನ್ನು ಯಶಸ್ವಿಗೊಳಿಸಿದ ವಿದ್ಯಾರ್ಥಿಗಳನ್ನು ಶ್ಲಾಘಿಸಿದರು.
ಲಸಿಕಾ ಅಭಿಯಾನದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ