March 24, 2024

Bhavana Tv

Its Your Channel

ಎರಡನೇ ಆಷಾಢ ಶುಕ್ರವಾರ ಶ್ರೀ ಚೌಡೇಶ್ವರಿ ದೇವಿಗೆ ಡ್ರೈಫ್ರೂಟ್ಸ್ ಅಲಂಕಾರ, ದೇವಿಯ ದರ್ಶನಕ್ಕೆ ಹರಿದುಬಂದ ಭಕ್ತಸಾಗರ

ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಆಷಾಡ ಎರಡನೇ ಶುಕ್ರವಾರದ ಅಂಗವಾಗಿ ದೇವಿಗೆ ವಿಶೇಷ ಪೂಜೆ ಪುರಸ್ಕಾರಗಳು ನಡೆದವು.

ಶ್ರೀ ಚೌಡೇಶ್ವರಿ ಅಮ್ಮನವರ ಶಿಲಾಮೂರ್ತಿಯನ್ನು ವಿಶೇಷವಾಗಿ ದ್ರಾಕ್ಷಿ, ಗೋಡಂಬಿ, ಖರ್ಜೂರ, ಬಾದಾಮಿ, ಅಂಜೂರದ ಒಣ ಹಣ್ಣುಗಳಿಂದ ಅಲಂಕರಿಸಲಾಗಿತ್ತು.

ದೇವಾಲಯಕ್ಕೆ ಆಗಮಿಸಿದ ಭಕ್ತಾದಿಗಳಿಗೆ ದೇವಾಲಯದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಕೆ.ಜಿ.ಕುಮಾರ್ ಅವರ ನೇತೃತ್ವದಲ್ಲಿ ಪ್ರಸಾದ ವಿನಿಯೋಗ ಕಾರ್ಯಕ್ರಮವು ನಡೆಯಿತು.

ಕೋವಿಡ್ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸಿದ ಭಕ್ತರಿಗೆ ಸಾಮಾಜಿಕ ಅಂತರದೊAದಿಗೆ ದೇವಿ ಶ್ರೀ ಚೌಡೇಶ್ವರಿ ಅಮ್ಮನವರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ವೇದಬ್ರಹ್ಮ ಶ್ರೀ. ರವಿಶಾಸ್ತ್ರಿ ಅವರ ನೇತೃತ್ವದಲ್ಲಿ ಪೂಜಾ ಪುರಸ್ಕಾರಗಳು ನಡೆದವು.

ಇದೇ ಸಂದರ್ಭದಲ್ಲಿ ದಾನಿಗಳಾದ ಪರಿಮಳಾ ನಾಗರಾಜ ಶೆಟ್ಟಿ, ಹೆಚ್.ಎಂ.ಚAದ್ರಶೇಖರ್, ವಿದ್ಯಾರ್ಥಿ ಭಂಡಾರ್ ಸುರೇಶ್, ಶ್ರೀರಂಗಪಟ್ಟಣದ ಎಸ್.ಜೆ.ಕುಮಾರಸ್ವಾಮಿ, ಮಹಿಳಾ ಹೋರಾಟಗಾರ್ತಿ ಚಂದ್ರಕಲಾರಮೇಶ್ ಅವರ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: