April 26, 2024

Bhavana Tv

Its Your Channel

ದಕ್ಷ ಪ್ರಾಮಾಣಿಕ ಅಧಿಕಾರಿ ಶಿವಕುಮಾರ್‌ರಿಗೆ ಬೀಳ್ಕೊಡುಗೆ

ಕೆ.ಆರ್.ಪೇಟೆ ತಾಲ್ಲೂಕಿನ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಪೋ ಮ್ಯಾನೇಜರ್ ಆಗಿ ಉತ್ತಮವಾದ ಸೇವೆಯನ್ನು ಸಲ್ಲಿಸಿ ಮಳವಳ್ಳಿ ಡಿಪೋ ಮ್ಯಾನೇಜರ್ ಆಗಿ ವರ್ಗಾವಣೆಗೊಂಡ ದಕ್ಷ ಪ್ರಾಮಾಣಿಕ ಅಧಿಕಾರಿ ಶಿವಕುಮಾರ್ ಅವರನ್ನು ಹೃದಯಸ್ಪರ್ಶಿಯಾಗಿ ಅಭಿನಂದಿಸಿ ಗೌರವಿಸಿ ಬೀಳ್ಕೊಡಲಾಯಿತು .

ಕೆ.ಆರ್.ಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ಸುಸಜ್ಜಿತವಾದ ಸಾರಿಗೆ ಸೇವೆಯನ್ನು ಒದಗಿಸಿ ಕೆಂಪು ಬಸ್ಸುಗಳ ಓಡಾಟವನ್ನೇ ಕಾಣದ ಕುಗ್ರಾಮಗಳಿಗೆ ಬಸ್ ಸೌಕರ್ಯವನ್ನು ದೊರಕಿಸಿಕೊಟ್ಟ ಕೀರ್ತಿಗೆ ಭಾಜನರಾಗಿರುವ ಶಿವಕುಮಾರ್ ತಮ್ಮ ಕೆಲಸದಲ್ಲಿ ಬದ್ಧತೆ ಹಾಗೂ ಶಿಸ್ತನ್ನು ಅಳವಡಿಸಿಕೊಂಡು ಕೆಲಸ ಮಾಡಿ ತಾಲ್ಲೂಕಿನ ಜನತೆಯ ಪ್ರೀತಿ, ಅಭಿಮಾನ ಹಾಗೂ ವಿಶ್ವಾಸಕ್ಕೆ ಭಾಜನರಾಗಿದ್ದಾರೆ.

ಈ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೋ ಮ್ಯಾನೇಜರ್ ಆಗಿ ವರ್ಗಾವಣೆಗೊಂಡ ಶಿವಕುಮಾರ್ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ವರದಿಗಾರರ ಸಂಘದ ರಾಜ್ಯಾಧ್ಯಕ್ಷ ಡಾ.ಕೆ.ಆರ್.ನೀಲಕಂಠ ಸನ್ಮಾನಿಸಿ ಗೌರವಿಸಿ ಬೀಳ್ಕೊಟ್ಟರು.

ವರದಿ: ಕೆ.ಎನ್.ಸಾಗರ್.ಕೃಷ್ಣರಾಜಪೇಟೆ .

error: