ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ನಾರಾಯಣಗೌಡ ಪ್ರಮಾಣವಚನ ಸ್ವೀಕಾರ ಅಭಿಮಾನಿಗಳ ವಿಜಯೋತ್ಸವ.ಪಟಾಕಿ ಸಿಡಿಸಿ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು.
ರಾಜ್ಯದ ಬಿಜೆಪಿ ಪಕ್ಷದ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಸತತವಾಗಿ ಎರಡನೇ ಅವಧಿಗೆ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಿದ ಕೆ.ಆರ್.ಪೇಟೆ ಶಾಸಕ ಡಾ.ನಾರಾಯಣಗೌಡರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪಟ್ಟಣದ ಮೈಸೂರು ಚನ್ನರಾಯಪಟ್ಟಣ ಮುಖ್ಯರಸ್ತೆಯಲ್ಲಿ ಪಟಾಕಿ ಸಿಡಿಸಿ ಸಿಹಿ ವಿತರಿಸಿ ಜಯಘೋಷಗಳನ್ನು ಕೂಗಿ ವಿಜಯೋತ್ಸವ ಆಚರಿಸಿದರು.
ಕೆ.ಆರ್.ಪೇಟೆ ಪಟ್ಟಣದ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ನಾರಾಯಣಗೌಡರ ಅಭಿಮಾನಿಗಳು ಬಿಜೆಪಿ ವರಿಷ್ಠರು ಈ ಹಿಂದೆ ಕೊಟ್ಟ ಮಾತಿನಂತೆ ನಾರಾಯಣ ಗೌಡರನ್ನು ಮತ್ತೆ ಸಚಿವರನ್ನಾಗಿ ನೇಮಕಮಾಡಿದ್ದಾರೆ. ಮಾಜಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿ ತಮಗೆ ಕೊಟ್ಟ ಖಾತೆಗಳಲ್ಲಿಯೇ ಅತ್ಯುತ್ತಮ ಸಾಧನೆ ಮಾಡಿದ ನಾರಾಯಣ ಗೌಡರು ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ಒತ್ತು ನೀಡಿದ್ದು ಬೇರು ಮಟ್ಟದಿಂದ ಬಿಜೆಪಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲು ಮುಂದಾಗಿದ್ದಾರೆ. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ಮತ್ತೆ ನಾರಾಯಣ ಗೌಡರನ್ನು ಮಂತ್ರಿಗಳನ್ನಾಗಿ ಮಾಡಿ ಅಧಿಕಾರ ನೀಡಿದ ಬಿಜೆಪಿ ವರಿಷ್ಠರಿಗೆ ಧನ್ಯವಾದಗಳನ್ನು ಸಮರ್ಪಿಸುವುದಾಗಿ ತಾಲ್ಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕಾರಿಗನಹಳ್ಳಿ ಕುಮಾರ್, ನಾರಾಯಣಗೌಡರ ಅಭಿಮಾನಿಗಳ ಬಳಗದ ಗೌರವಾಧ್ಯಕ್ಷ ಕೆ.ಆರ್.ನೀಲಕಂಠ, ತಾಲ್ಲೂಕು ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಲತಾಮುರಳಿ ಹೇಳಿದರು..
ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಂಭ್ರಮಾಚರಣೆಯ ನೇತೃತ್ವವನ್ನು ನಗರ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಕಲಾರಮೇಶ್, ಲತಾ, ನಂದಿನಿ, ವಿಜಯಲಕ್ಷ್ಮೀ, ಮೋದೂರು ಮಂಜು, ರವಿಶಿವಕುಮಾರ್, ಬಸವರಾಜು, ಜಗದೀಶ್ ಸೇರಿದಂತೆ ನೂರಾರು ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹಸಚಿವ ಅಮಿತ್ ಷಾ, ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ಪರವಾಗಿ ಘೋಷಣೆಯನ್ನು ಕೂಗಿ ಸಂಭ್ರಮಿಸಿದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ
More Stories
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ
ದೇವಿರಮ್ಮಣ್ಣೆ ಕೆರೆ ಅಂಗಳಕ್ಕೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಬಾಂಧವರು