ನಾಡದೇವತೆ ತಾಯಿ ಶ್ರೀ ಚೌಡೇಶ್ವರಿ ದೇವಿಗೆ ಬೆಣ್ಣೆ ಅಲಂಕಾರ, ವಿಶೇಷಪೂಜೆ ಕಣ್ತುಂಬಿಕೊoಡ ಭಕ್ತಾದಿಗಳು.ಮೊಳಗಿದ ಜಯಘೋಷಗಳು.
ಕೃಷ್ಣರಾಜಪೇಟೆ ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಆಷಾಡ ಕೊನೆಯ ಶುಕ್ರವಾರದ ಅಂಗವಾಗಿ ತಾಯಿ ಚೌಡೇಶ್ವರಿ ಅಮ್ಮನವರ ಶಿಲಾಮೂರ್ತಿಯನ್ನು ವಿಶೇಷವಾಗಿ ಬೆಣ್ಣೆ ಮತ್ತು ಡ್ರೈಪ್ರೂಟ್ಸ್ ಗಳಿಂದ ಅಲಂಕರಿಸಲಾಗಿತ್ತು.
ದೇವಿ ಶ್ರೀ ಚೌಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಪುರಸ್ಕಾರಗಳು ವೇದಬ್ರಹ್ಮ ರವಿಶಾಸ್ತ್ರಿ ಆಚಾರ್ಯ ಅವರ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ನಡೆದವು.
ಕೃಷ್ಣರಾಜಪೇಟೆ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಭಾಗಗಳಿಂದ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ಧ ಭಕ್ತರು ದೇವಿಯ ದರ್ಶನ ಪಡೆದು ಕೃತಾರ್ಥರಾದರು.
ಮುತ್ತೈದೆಯರು ಹಾಗೂ ಹೆಣ್ಣು ಮಕ್ಕಳು ನಿಂಬೇಹಣ್ಣಿನ ದೀಪಗಳಿಂದ ಆರತಿ ಬೆಳಗಿ ಹರಕೆಯನ್ನು ತೀರಿಸಿದರು. ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಗೌರವಾಧ್ಯಕ್ಷ ಕೆ.ಆರ್.ನಾಗರಾಜಶೆಟ್ಟಿ ಅವರ ನೇತೃತ್ವದಲ್ಲಿ ಭಕ್ತರಿಗೆ ಪ್ರಸಾದವನ್ನು ವಿತರಿಸಲಾಯಿತು.
ದೇವಾಲಯ ಸಮಿತಿಯ ಅಧ್ಯಕ್ಷ ಹೆಚ್.ಎಂ.ಚAದ್ರಶೇಖರ್, ಮಾಜಿಅಧ್ಯಕ್ಷ ಕಬಾಬ್ ನಾರಾಯಣಪ್ಪ, ಕಾರ್ಯದರ್ಶಿ ವಿದ್ಯಾರ್ಥಿ ಭಂಡಾರ್ ಸುರೇಶ್, ಕೆ.ಎಸ್.ಮಧುಸೂದನ್, ಕೆ.ಎಸ್.ಮೋಹನಕುಮಾರ್, ವಿಶ್ರಾಂತ ಪೋಲಿಸ್ ಅಧಿಕಾರಿ ಮಾದಯ್ಯ, ದಾನಿಗಳಾದ ಕೆ.ಆರ್.ಚಂದ್ರಶೇಖರ್, ಪರಿಮಳನಾಗರಾಜಶೆಟ್ಟಿ, ಕೆ.ಜಿ.ಕುಮಾರ್, ಎಂಜಿನಿಯರ್ ವೆಂಕಟೇಶ್, ಶ್ರೀರಂಗಪಟ್ಟಣ ಕುಮಾರಸ್ವಾಮಿ, ಕೈಗೋನಹಳ್ಳಿ ಈರಪ್ಪಣ್ಣ, ಪುರಸಭೆ ಮಾಜಿಅಧ್ಯಕ್ಷ ಕೆ.ಸಿ.ವಾಸು, ಕೆ.ಆರ್.ಮಹೇಶ್ ಪೂಜಾ ವಿಧಿವಿಧಾನಗಳ ನೇತೃತ್ವ ವಹಿಸಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ
More Stories
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ
ದೇವಿರಮ್ಮಣ್ಣೆ ಕೆರೆ ಅಂಗಳಕ್ಕೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಬಾಂಧವರು
ಕಾರ್ಯಸಿದ್ಧಿ ಆಂಜನೇಯ ಸ್ವಾಮಿಯವರಿಗೆ ವಿಶೇಷ ಪೂಜೆ