ಮಂಡ್ಯ: ಭೀಮನ ಅಮಾವಾಸ್ಯೆಯ ಅಂಗವಾಗಿ ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅಮ್ಮನವರನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು ..
ಶ್ರೀ ಚೌಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಪುರಸ್ಕಾರಗಳು ದೇವಾಲಯದ ಪ್ರಧಾನ ಅರ್ಚಕರಾದ ವೇದಬ್ರಹ್ಮ ಶ್ರೀ ರವಿಶಾಸ್ತ್ರಿ ಮತ್ತು ಮೋಹನಶರ್ಮ ಅವರ ನೇತೃತ್ವದಲ್ಲಿ ನಡೆದವು.
ಶ್ರೀ ಚೌಡೇಶ್ವರಿ ಅಮ್ಮನವರ ದರ್ಶನ ಪಡೆದು ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಕ್ತಾದಿಗಳಿಗೆ ಪುಳಿಯೊಗರೆ ಮೊಸರನ್ನ ಪ್ರಸಾದವನ್ನು ವಿತರಿಸಲಾಯಿತು.
ನಾಡದೇವತೆ ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಗೌರವ ಅಧ್ಯಕ್ಷ ನೇಕಾರ ತೊಗಟವೀರ ಸಮಾಜದ ಮುಖಂಡ ಸಮಾಜಸೇವಕರಾದ ಕೆ.ಆರ್.ನಾಗರಾಜಶೆಟ್ಟಿ, ಅಧ್ಯಕ್ಷ ಹೆಚ್.ಎಂ.ಚAದ್ರಶೇಖರ್, ಪ್ರಧಾನ ಕಾರ್ಯದರ್ಶಿ ವಿದ್ಯಾರ್ಥಿ ಭಂಡಾರ್ ಸುರೇಶ್, ಮಾಜಿಅಧ್ಯಕ್ಷ ಕಬಾಬ್ ನಾರಾಯಣಪ್ಪ, ದಾನಿಗಳಾದ ಪರಿಮಳನಾಗರಾಜಶೆಟ್ಟಿ, ಕೆ.ಆರ್.ಚಂದ್ರಶೇಖರ್, ಕೆ.ಎಸ್.ಮಲ್ಲಿಕಾರ್ಜುನ, ಕೆ.ಎಸ್.ಮಧುಸೂದನ್, ಕೆ.ಜಿ.ಕುಮಾರ್, ಕೆ.ಆರ್.ಮಹೇಶ್, ಪುರಸಭೆಯ ಮಾಜಿಅಧ್ಯಕ್ಷ ಕೆ.ಸಿ.ವಾಸು, ವಿಶ್ರಾಂತ ಪೋಲಿಸ್ ಅಧಿಕಾರಿ ಮಾದಯ್ಯ, ಕೆ.ಹೆಚ್.ಗೋಪಾಲ್, ಕೆ.ಎಸ್.ಗೋಪಾಲ್, ಎಸ್.ಜೆ.ಕುಮಾರಸ್ವಾಮಿ, ಎಂಜಿನಿಯರ್ ವೆಂಕಟೇಶ್, ನಾಗರತ್ನಮ್ಮಸಿದ್ಧಪ್ಪಶೆಟ್ಟಿ ಸೇರಿದಂತೆ ನೂರಾರು ಜನರು ಭೀಮನವಮಾಸ್ಯೆಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು..
ವರದಿ
ಡಾ.ಕೆ.ಆರ್.ನೀಲಕಂಠ.
ಕೃಷ್ಣರಾಜಪೇಟೆ.
More Stories
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ
ದೇವಿರಮ್ಮಣ್ಣೆ ಕೆರೆ ಅಂಗಳಕ್ಕೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಬಾಂಧವರು