April 25, 2024

Bhavana Tv

Its Your Channel

ರೈತಪರ ಭೂಸುಧಾರಣಾ ಕಾಯ್ದೆ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ರೈತ ಸಂಘದಿoದ ಮನವಿ

ಮಂಡ್ಯ: ರೈತಪರವಾದ ಭೂಸುಧಾರಣಾ ಕಾಯ್ದೆಗಳನ್ನು ಜಾರಿಗೊಳಿಸಬೇಕು ಅಲ್ಲದೇ ರೈತವಿರೋಧಿಯಾಗಿರುವ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು, ದುಡಿಯುವ ವರ್ಗಗಳಿಗೆ ಕೆಲಸ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಕೃಷಿಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಿಸಿ ಸಮರ್ಪಕವಾಗಿ ಕೆಲಸ ಕಾರ್ಯಗಳನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ತಹಶೀಲ್ದಾರ್ ಮೂಲಕ ಗಂಗೇನಹಳ್ಳಿ ಗಿರೀಶ್ ಮತ್ತು ಪ್ರಧಾನ ಕಾರ್ಯದರ್ಶಿ ಗೋಪಾಲ್ ಮನವಿ ಸಲ್ಲಿಸಿದರು …

ಕರ್ನಾಟಕ ರಾಜ್ಯ ರೈತಸಂಘ ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಗಾರರ ಸಂಘದ ವತಿಯಿಂದ ನೂರಾರು ಮಹಿಳೆಯರು ಹಾಗೂ ಕೃಷಿಕೂಲಿ ಕಾರ್ಮಿಕರು ಸಿಐಟಿಯು ಪಟ್ಟಣದ ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಬೂಕನಕೆರೆ ನಾಗರಾಜು ಮತ್ತು ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ಗಂಗೇನಹಳ್ಳಿ ಗಿರೀಶ್ ಮಾತನಾಡಿ ಕೋವಿಡ್ ನಲ್ಲಿ ಮೃತರಾದ ಕೂಲಿ ಕಾರ್ಮಿಕ ಕುಟುಂಬಗಳಿಗೆ ಕನಿಷ್ಠ ೦೫ ಲಕ್ಷರೂ ಪರಿಹಾರ ನೀಡಬೇಕು. ಆರೋಗ್ಯ ವಿಮಾಕ್ಷೇತ್ರಕ್ಕೆ ಕನಿಷ್ಠ ಶೇಕಡಾ ೦೬ ಜಿಡಿಪಿ ನಿಗದಿಪಡಿಸಬೇಕು, ವಿದ್ಯುಚ್ಛಕ್ತಿ ಇಲಾಖೆಯ ಖಾಸಗೀಕರಣವನ್ನು ಕೈಬಿಡಬೇಕು, ದುಡಿಯುವ ಕೈಗಳಿಗೆ ನರೇಗಾ ಯೋಜನೆಯಡಿಯಲ್ಲಿ ಕೈತುಂಬಾ ಕೆಲಸ ನೀಡಬೇಕು, ಮಂಡ್ಯ ಹಾಲು ಒಕ್ಕೂಟದ ಹಾಲು ನೀರು ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸುವ ಜೊತೆಗೆ ಸಂವಿಧಾನ ಬದ್ಧವಾದ ವಿವಿಧ ಸೌಲಭ್ಯಗಳನ್ನು ಕೃಷಿಕೂಲಿ ಕಾರ್ಮಿಕರಿಗೆ ನೀಡಬೇಕೆಂದು ಒತ್ತಾಯಿಸಿ ಉಪತಹಶೀಲ್ದಾರ್ ಹಿರಿಯಣ್ಣ ಅವರಿಗೆ ಮನವಿ ಸಲ್ಲಿಸಿದರು. ನೂರಾರು ಕೃಷಿ ಕೂಲಿ ಕಾರ್ಮಿಕ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: