ಕೆ.ಆರ.ಪೇಟೆ: ಕೆ.ಆರ್.ಪೇಟೆಯ ಮಿನಿ ವಿಧಾನಸೌಧದಲ್ಲಿ ಗಣೇಶೋತ್ಸವ ಸಂಭ್ರಮ..ಆದಿಪೂಜಿತ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ ತಹಶೀಲ್ದಾರ್ ಎಂ.ಶಿವಮೂರ್ತಿ.
ಪರಿಸರ ಸ್ನೇಹಿ ಗಣಪನನ್ನು ಪ್ರತಿಷ್ಠಾಪಿಸಿ ಆದಿಪೂಜಿತನನ್ನು ಪೂಜಿಸಿ ಲೋಕಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ತಾಲ್ಲೂಕು ದಂಡಾಧಿಕಾರಿಗಳಾದ ತಹಶೀಲ್ದಾರ್ ಎಂ.ಶಿವಮೂರ್ತಿ ಮತ್ತು ಸಿಬ್ಬಂಧಿಗಳು..
ಕಾರ್ಯಕ್ರಮದಲ್ಲಿ ಮುಗಿಲು ಮುಟ್ಟಿದ ಸಂಭ್ರಮ. ವೇದಬ್ರಹ್ಮ ಶ್ರೀ ನಾರಾಯಣಾಚಾರ್ಯ ಮತ್ತು ಮೋಹನಆಚಾರ್ಯರ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮಗಳು..
ಕೋವಿಡ್ ಹಿನ್ನೆಲೆಯಲ್ಲಿ ಗಣೇಶೋತ್ಸವವನ್ನು ನಾಡಿನಾದ್ಯಂತ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಗಣೇಶೋತ್ಸವ ಆಚರಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸದೇ ಸರಳವಾಗಿ ಪೂಜೆ ಪುರಸ್ಕಾರಗಳನ್ನು ನಡೆಸಿ ಐದು ದಿನಗಳ ಒಳಗೆ ಗಣಪತಿಯನ್ನು ನಿಗದಿತ ಸ್ಥಳದಲ್ಲಿಯೇ ವಿಸರ್ಜನೆ ಮಾಡಬೇಕು ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಮನವಿ ಮಾಡಿದರು..
ಗಣೇಶೋತ್ಸವ ಪೂಜಾ ಕಾರ್ಯಕ್ರಮದಲ್ಲಿ ತಾಲ್ಲೂಕು ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷೆ ಚಂದ್ರಕಲಾ ಪ್ರಕಾಶ್, ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಉಪತಹಶೀಲ್ದಾರ್ಗಳಾದ ಲಕ್ಷ್ಮೀಕಾಂತ್, ಚಿಕ್ಕಲಕ್ಷ್ಮೀ, ಹಿರಿಯಣ್ಣ, ರಾಮಚಂದ್ರಪ್ಪ, ವಿವಿಧ ವೃತ್ತಗಳ ಗ್ರಾಮಲೆಕ್ಕಾಧಿಕಾರಿಗಳು, ರಾಜಶ್ವನಿರೀಕ್ಷಕರು ಹಾಗೂ ತಾಲ್ಲೂಕು ಕಛೇರಿಯ ಸಿಬ್ಬಂಧಿಗಳು ಉಪಸ್ಥಿತರಿದ್ದರು.
ವರದಿ: ಡಾ.ಕೆ.ಆರ್.ನೀಲಕಂಠ
ಕೃಷ್ಣರಾಜಪೇಟೆ, ಮಂಡ್ಯ
More Stories
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ
ದೇವಿರಮ್ಮಣ್ಣೆ ಕೆರೆ ಅಂಗಳಕ್ಕೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಬಾಂಧವರು
ಕಾರ್ಯಸಿದ್ಧಿ ಆಂಜನೇಯ ಸ್ವಾಮಿಯವರಿಗೆ ವಿಶೇಷ ಪೂಜೆ