April 25, 2024

Bhavana Tv

Its Your Channel

ಕೆ.ಆರ್.ಪೇಟೆ ಪಶು ಆಸ್ಪತ್ರೆಯ ಜಾನುವಾರು ಅಭಿವೃದ್ಧಿ ಅಧಿಕಾರಿ ಶಂಕರ್‌ರವರ ಸಮಾಜಮುಖಿ ಕೆಲಸಕ್ಕೆ ಸಾರ್ವಜನಿಕರ ಮೆಚ್ಚುಗೆ

ಕೆ.ಆರ್.ಪೇಟೆ:ಕೆ.ಆರ್.ಪೇಟೆ ಪಶು ಆಸ್ಪತ್ರೆಯ ಜಾನುವಾರು ಅಭಿವೃದ್ಧಿ ಅಧಿಕಾರಿ ಶಂಕರ್ ಅವರ ಸಮಾಜಮುಖಿ ಕಳಕಳಿ ಅನಾರೋಗ್ಯಪೀಡಿತ ನಾಯಿಗಳಿಗೆ ಚಿಕಿತ್ಸೆ, ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಸ್ತೆಗಳು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ, ಮಟನ್ ಮಾರ್ಕೇಟ್ ಸೇರಿದಂತೆ ಎಲ್ಲೆಂದರಲ್ಲಿ ಬೀದಿಯಲ್ಲಿ ಸುತ್ತಾಡುವ ಅನಾರೋಗ್ಯ ಪೀಡಿತ ಬೀದಿನಾಯಿಗಳಿಗೆ ಚಿಕಿತ್ಸೆ ನೀಡುವ ಮೂಲಕ ತಮ್ಮ ಪ್ರಾಣಿಗಳ ಮೇಲಿನ ಪ್ರೇಮವನ್ನು ಜಾನುವಾರುಗಳ ಅಭಿವೃದ್ಧಿ ಅಧಿಕಾರಿ ಶಂಕರ್ ಅಭಿವ್ಯಕ್ತಪಡಿಸಿದರು..

ಕೆ.ಆರ್.ಪೇಟೆ ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ೨೦ಕ್ಕೂ ಹೆಚ್ಚಿನ ಬೀದಿ ನಾಯಿಗಳಿಗೆ ಚಿಕಿತ್ಸೆ ನೀಡಿ ಬಿಸ್ಕೆಟ್ ಹಾಕಿ ಉಪಚರಿಸಿದ ಶಂಕರ್ ಅವರ ಕಾಳಜಿ, ಕಳಕಳಿ ಹಾಗೂ ಪ್ರಾಣಿಗಳ ಮೇಲಿನ ಪ್ರೀತಿಯನ್ನು ಪ್ರಮೋದ್ ಶ್ಲಾಘಿಸಿದರು.

ವರದಿ
ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: