April 26, 2024

Bhavana Tv

Its Your Channel

ಕೆ.ಆರ್.ಪೇಟೆ ಪಟ್ಟಣದ ಪುರಸಭೆಯ ವಿವಿಧ ಬಡಾವಣೆಗಳ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಮಾಲೋಚನಾ ಸಭೆ

ಕೆ.ಆರ್.ಪೇಟೆ ಪಟ್ಟಣದ ಪುರಸಭೆಯ ವಿವಿಧ ಬಡಾವಣೆಗಳ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಮಾಲೋಚನಾ ಸಭೆಯು ಇದೇ ಅಕ್ಟೋಬರ್ ತಿಂಗಳ. ೨೦ರಂದು ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ ಎಂದು ಸಂಚಾಲಕರಾದ ಗ್ರಾಮಭಾರತಿ ಬಸವೇಗೌಡ ಮತ್ತು ಎಲ್.ಐ.ಸಿ ಸುರೇಶ್ ಕುಮಾರ್ ತಿಳಿಸಿದ್ದಾರೆ ..

ಇಂದು ಕೆ.ಆರ್.ಪೇಟೆ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಸವೇಗೌಡ ಮತ್ತು ಸುರೇಶ್ ಕುಮಾರ್ ಪಟ್ಟಣದ ವಿವಿಧ ಬಡಾವಣೆಗಳ ಮೂಲಭೂತ ಸಮಸ್ಯೆಗಳ ನಿವಾರಣೆ ಹಾಗೂ ಅಗತ್ಯವಾಗಿ ಆಗಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸುವ ಜೊತೆಗೆ ಕೆ.ಆರ್.ಪೇಟೆ ಪಟ್ಟಣದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘವನ್ನು ರಚಿಸಿಕೊಂಡು ರಸ್ತೆ, ಬೀದಿ ದೀಪಗಳು, ಶುದ್ಧ ಕುಡಿಯುವ ನೀರು ಸೇರಿದಂತೆ ಕನಿಷ್ಢ ಮೂಲಭೂತ ಸಮಸ್ಯೆಗಳನ್ನು ಒದಗಿಸಿಕೊಡಲು ಪುರಸಭೆಯ ಆಡಳಿತ ಮಂಡಳಿಯನ್ನು ಗಮನ ಸೆಳೆಯಲು ಪಟ್ಟಣದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ನಿರ್ದೇಶಕರನ್ನು ಸಭೆಯಲ್ಲಿ ಆಯ್ಕೆ ಮಾಡಿಕೊಂಡು ಸಂಘದ ನೊಂದಣಿ ಮಾಡಿಸಿ ಸಂಘದ ಮೂಲಕ ರಚನಾತ್ಮಕ ಚಟುವಟಿಕೆಗಳನ್ನು ಕೈಗೊಳ್ಳಲು ಒತ್ತು ನೀಡಲಾಗುವುದು ಎಂದು ವಿವರಿಸಿದ ಬಸವೇಗೌಡ ಮತ್ತು ಸುರೇಶ್ ಪಟ್ಟಣದ ಅಭಿವೃದ್ಧಿ ಹಾಗೂ ಶ್ರೀ ಸಾಮಾನ್ಯರ ಕ್ಷೇಮದ ಬಗ್ಗೆ ಅಭಿರುಚಿಯನ್ನು ಹೊಂದಿರುವ ಆಸಕ್ತ ಜನರು ಸಭೆಯಲ್ಲಿ ಭಾಗವಹಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕು ಎಂದು ಕೈಮುಗಿದು ಮನವಿ ಮಾಡಿದರು.
ಪಟ್ಟಣದ ನಿವಾಸಿಗಳಾದ ವಿಶ್ರಾಂತ ಯೋಧರಾದ ಮಿಲ್ಟ್ರಿ ಸುಕುಮಾರ್ ಪುರಸಭೆಯ ಆಡಳಿತ ಮಂಡಳಿ ಹಾಗೂ ನಿರ್ಗಮಿತ ಮುಖ್ಯಾಧಿಕಾರಿಗಳ ಕಾರ್ಯವೈಖರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಜರೂರಾಗಿ ಆಗಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಚಿವರ ಗಮನ ಸೆಳೆಯಲು ಸಧ್ಯದಲ್ಲಿಯೇ ಪಟ್ಟಣದ ಸಮಗ್ರವಾದ ಅಭಿವೃದ್ಧಿಯ ಬಗ್ಗೆ ಕನಸು ಹೊತ್ತಿರುವ ಸಮಾನ ಮನಸ್ಕರು ನಿಯೋಗ ಹೋಗಿ ಚರ್ಚೆ ನಡೆಸಲು ಮುಂದಾಗಬೇಕು ಎಂಬ ಸಲಹೆಗೆ ಸಮಾನ ಮನಸ್ಕರು ಸಮ್ಮತಿಸಿದರು..

ಪತ್ರಿಕಾಗೋಷ್ಠಿಯಲ್ಲಿ ವಿಶ್ರಾಂತ ಶಿಕ್ಷಕರಾದ ಡಿ.ರಾಜೇಗೌಡ, ಕರೀಗೌಡ, ಶಶಿಕುಮಾರ್, ಮರುವನಹಳ್ಳಿ ಶಂಕರ್, ಗೋವಿಂದ ರಾಜು ಮತ್ತಿತರರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: