ಕೃಷ್ಣರಾಜಪೇಟೆ: ಮೋರ್ ಸೂಪರ್ ಮಾರ್ಕೆಟ್ ಗೆ ಸಚಿವ ಡಾ.ನಾರಾಯಣಗೌಡ ಭೇಟಿ.ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ವಸ್ತುಗಳನ್ನು ಮಾರಾಟ ಮಾಡಿ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿರುವ ಮೋರ್ ಸೂಪರ್ ಮಾರ್ಕೆಟ್ ವ್ಯವಸ್ಥಾಪಕರಿಗೆ ಶುಭ ಹಾರೈಸಿದ ಸಚಿವ ನಾರಾಯಣಗೌಡ …
ಕೃಷ್ಣರಾಜಪೇಟೆ ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಮುಂಭಾಗದ ಕೆ.ನಂಜುAಡೇಗೌಡ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಆರಂಭವಾದ ಮೋರ್ ಸೂಪರ್ ಮಾರ್ಕೆಟ್ ಗೆ ರಾಜ್ಯದ ಯುವಜನ ಸಬಲೀಕರಣ, ಕ್ರೀಡೆ, ರೇಷ್ಮೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಭೇಟಿ ನೀಡಿ ನೂತನ ಉಧ್ಯಮಕ್ಕೆ ಶುಭ ಹಾರೈಸಿದರು…
ಮಾರುಕಟ್ಟೆಯಲ್ಲಿನ ಅಂಗಡಿ ಮುಂಗಟ್ಟುಗಳಿಗೆ ಹೋಲಿಸಿದರೆ ಮೋರ್ ಸೂಪರ್ ಮಾರ್ಕೆಟ್ ನಲ್ಲಿ ಗುಣಮಟ್ಟದ ವಸ್ತುಗಳು ಹಾಗೂ ಆಹಾರ ಪದಾರ್ಥಗಳು ನಿಖರವಾಗಿ ಸ್ಪರ್ಧಾತ್ಮಕ ದರದಲ್ಲಿ ದೊರೆಯುತ್ತಿವೆ. ಕೆ.ಆರ್.ಪೇಟೆ ಪಟ್ಟಣವು ಮಂಡ್ಯ ಜಿಲ್ಲೆಯಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಟ್ಟಣವಾಗಿದ್ದು ಮೋರ್ ಸೂಪರ್ ಮಾರ್ಕೆಟ್ ನಂತಹ ಸುಸಜ್ಜಿತವಾದ ಮಾಲ್ ಗಳು ಕೆ.ಆರ್.ಪೇಟೆಗೆ ಆಗಮಿಸಿರುವುದು ಅಭಿಮಾನದ ಸಂಗತಿಯಾಗಿದೆ. ಮೋರ್ ಸೂಪರ್ ಮಾರ್ಕೇಟ್ ವ್ಯವಸ್ಥಾಪಕರಾದ ಮಾಚಗೋನಹಳ್ಳಿಯ ಚೇತನ್ ಗೌಡ ಅವರು ನಮ್ಮ ಪಟ್ಟಣದಲ್ಲಿ ಮೋರ್ ಸೂಪರ್ ಮಾರ್ಕೆಟ್ ಆರಂಭಿಸಿ ೩೦ಜನಕ್ಕೂ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು.
ಮೋರ್ ಸೂಪರ್ ಮಾರ್ಕೆಟ್ ನಲ್ಲಿ ಒಂದು ಸುತ್ತು ಹಾಕಿದ ಸಚಿವರು ವಿವಿಧ ವಸ್ತುಗಳ ಬೆಲೆಯ ಮಾಹಿತಿಯನ್ನು ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಮೋರ್ ಸೂಪರ್ ಮಾರ್ಕೆಟ್ ಗೆ ಭೇಟಿ ನೀಡಿದ ಸಚಿವ ಡಾ.ನಾರಾಯಣಗೌಡ ಅವರನ್ನು ಮೋರ್ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಿದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ