ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮಂಜೇಗೌಡ ಅವರ ಮೇಲೆ ಮಾರಣಾಂತಿಕ ಹಲ್ಲೆ..ಒಬ್ಬ ಆರೋಪಿ ಬಂಧನ ಮತ್ತೊಬ್ಬ ಆರೋಪಿಗೆ ಶೋಧ …
ಕೆ.ಆರ್.ಪೇಟೆ ; ಪಟ್ಟಣದ ಪುರಸಭೆಯ ವಾರ್ಡ್.ನಂ.1ರ ಜಯನಗರ ಬಡಾವಣೆಯಲ್ಲಿ ವಾಸವಾಗಿರುವ ತಾಲ್ಲೂಕಿನ ಪೇಟೆ ಅರಳಕುಪ್ಪೆ ಗ್ರಾಮದವರಾದ ಹೊಳೆನರಸೀಪುರ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಮಂಜೇಗೌಡ(59) ಅವರ ಮೇಲೆ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಟ್ಟಣದ ಇಡ್ಲಿ ಬಸವ ಮತ್ತು ಅವರ ಸಹೋದರ ಪರಶಿವ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಸರ್ವೆ ಮಂಜೇಗೌಡರ ಮೂಗಿನ ಕಂಬವು ಮುರಿದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಲ್ಲೆ ಘಟನೆಯ ಬಗ್ಗೆ ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಇಡ್ಲಿ ಬಸವನನ್ನು ಬಂಧಿಸಿರುವ ಪೋಲಿಸರು ಮತ್ತೊಬ್ಬ ಹಲ್ಲೆ ಆರೋಪಿ ಪರಶಿವನ ಬಂಧನಕ್ಕೆ ಬಲೆ ಬೀಸಿದ್ದಾರೆ…
ಸರ್ಕಾರಿ ಅಧಿಕಾರಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಕೆ.ಆರ್.ಪೇಟೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ ಆಗ್ರಹಿಸಿದ್ದಾರೆ…
ವರದಿ; ಡಾ.ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ.
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ