ಕೆ.ಆರ್.ಪೇಟೆ:- ರಾಜ್ಯ ಯುವಜನತಾದಳದ ಅಧ್ಯಕ್ಷರು ಹಾಗೂ ಯುವಜನರ ಆಶಾಕಿರಣವಾಗಿರುವ ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಅಂಗವಾಗಿ ಕೆ.ಆರ್.ಪೇಟೆ ತಾಲೂಕು ಯುವ ಜನತಾದಳದ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ನಿಖಿಲ್ ಅವರಿಗೆ ಶುಭಕೋರಲಾಯಿತು.
ಕೃಷ್ಣರಾಜಪೇಟೆ ತಾಲ್ಲೂಕು ಯುವಜನತಾದಳದ ಅಧ್ಯಕ್ಷರಾದ ಪುರಸಭೆ ಸದಸ್ಯ ಕೆ.ಎಸ್.ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ ಪಟ್ಟಣದ ದುಂಡಶೆಟ್ಟಿಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬ್ರೆಡ್ ವಿತರಿಸಿದ ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಮುಖಂಡರಾದ ಬಸ್ ಕೃಷ್ಣೇಗೌಡ, ಕೆ.ಆರ್.ಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಕೆ.ಅಶೋಕ್, ಎಪಿಎಂಸಿ ಮಾಜಿಅಧ್ಯಕ್ಷ ಎಂ.ಪಿ.ಲೋಕೇಶ್, ಕರವೇ ತಾಲೂಕು ಉಪಾಧ್ಯಕ್ಷ ಶ್ರೀನಿಧಿಶ್ರೀನಿವಾಸ್, ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳ ಬಳಗದ ತಾಲೂಕು ಅಧ್ಯಕ್ಷ ಲೋಕೇಶ್, ಪುರಸಭೆ ಉಪಾಧ್ಯಕ್ಷೆ ಗಾಯತ್ರಿಸುಬ್ಬಣ್ಣ, ಸದಸ್ಯರಾದ ಇಂದ್ರಾಣಿವಿಶ್ವನಾಥ್, ಹೆಚ್.ಡಿ.ಅಶೋಕ್, ಯುವಮುಖಂಡರಾದ ದಯಾನಂದ, ಗದ್ದೆಹೊಸೂರು ದರ್ಶನ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರವಿ ಸೇರಿದಂತೆ ಐವತ್ತಕ್ಕೂ ಹೆಚ್ಚಿನ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹಣ್ಣುಹಂಫಲು ಬ್ರೆಡ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ ಜಿಲ್ಲೆ
More Stories
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ
ದೇವಿರಮ್ಮಣ್ಣೆ ಕೆರೆ ಅಂಗಳಕ್ಕೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಬಾಂಧವರು