April 26, 2024

Bhavana Tv

Its Your Channel

ಕೆ.ಆರ್.ಪೇಟೆ ಪುರಸಭೆಗೆ ನಾಮನಿರ್ದೇಶನ ಸದಸ್ಯರಾಗಿ ತಾಲೂಕು ಕಸಾಪ ಮಾಜಿಅಧ್ಯಕ್ಷ ಕೆ.ಆರ್.ನೀಲಕಂಠ ನೇಮಕ

ಕೆ.ಆರ್.ಪೇಟೆ ಪುರಸಭೆಗೆ ನಾಮನಿರ್ದೇಶನ ಸದಸ್ಯರಾಗಿ ತಾಲೂಕು ಕಸಾಪ ಮಾಜಿಅಧ್ಯಕ್ಷ ಕೆ.ಆರ್.ನೀಲಕಂಠ ನೇಮಕ ನಾಗರಿಕರ ಸಂತಸ, ಅಭಿನಂದನೆ ಸಮರ್ಪಣೆ …

ಕೆ.ಆರ್.ಪೇಟೆ ಪುರಸಭೆಯ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಕಾರ ತೊಗಟವೀರ ಸಮಾಜದ ಮುಖಂಡ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೆ.ಆರ್.ನೀಲಕಂಠ ಅವರನ್ನು ರಾಜ್ಯ ಸರ್ಕಾರವು ನೇಮಕ ಮಾಡಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಸಮಾಜದ ಹಿರಿಯ ಮುಖಂಡರಾದ ವಿಶ್ರಾಂತ ಎಂಜಿನಿಯರ್ ವೆಂಕಟೇಶ್ ಅವರ ನೇತೃತ್ವದಲ್ಲಿ ಹೃದಯಸ್ಪರ್ಶಿಯಾಗಿ ಅಭಿನಂದಿಸಿ ಗೌರವಿಸಲಾಯಿತು.

ಮಂಡ್ಯ ಜಿಲ್ಲಾ ನಾಯಕ ಸಂಘದ ಅಧ್ಯಕ್ಷರಾದ ಅಗ್ರಹಾರಬಾಚಹಳ್ಳಿ ಆರ್.ಜಗಧೀಶ್, ನೇಕಾರ ತೊಗಟವೀರ ಸಮಾಜದ ಮುಖಂಡ ಉಧ್ಯಮಿ ಕೆ.ಹೆಚ್.ಗೋಪಾಲ್, ಪ್ರಸಾದ್ ನೀಲಕಂಠ ಅವರನ್ನು ಅಭಿನಂದಿಸಿ ಜನಪರವಾಗಿ ಕೆಲಸ ಮಾಡಿ ಜನಸಾಮಾನ್ಯರ ನೋವು ನಲಿವುಗಳಿಗೆ ಪುರಸಭೆಯಲ್ಲಿ ಧ್ವನಿಯಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಎಂಜಿನಿಯರ್ ವೆಂಕಟೇಶ್ ಕಿವಿಮಾತು ಹೇಳಿದರು…

ವರದಿ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ. ಮಂಡ್ಯ

error: