May 4, 2024

Bhavana Tv

Its Your Channel

ಕೆ.ಆರ್.ಪೇಟೆ ತಾಲೂಕು ಆಡಳಿತದಿಂದ ಸವಿತಾ ಮಹರ್ಷಿಗಳ ಜಯಂತ್ಯೋತ್ಸವ ಆಚರಣೆ

ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಸಚಿವ ಡಾ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.ಸವಿತಾ ಮಹರ್ಷಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದ ಸಚಿವರು ಹಾಗೂ ಅತಿಥಿಗಳು.
ಸಚಿವ ಡಾ.ನಾರಾಯಣಗೌಡ ಮಾತನಾಡಿ ಸವಿತಾ ಮಹರ್ಷಿಗಳು ಪ್ರಾತಃ ಸ್ಮರಣೀಯರಾಗಿದ್ದಾರೆ. ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಸವಿತಾ ಸಮಾಜದ ಬಂಧುಗಳ ಕೊಡುಗೆ ಅಪಾರ.ಸವಿತಾ ಮಹರ್ಷಿಗಳ ಗುಣಗಾನ ಮಾಡಿದರು.ಕೆ.ಆರ್.ಪೇಟೆ ಪಟ್ಟಣದಲ್ಲಿ ಸವಿತಾ ಮಹರ್ಷಿಗಳ ಹೆಸರಿನಲ್ಲಿ ಭವನ ನಿರ್ಮಿಸಲು ಸುಸಜ್ಜಿತವಾದ ಜಾಗವನ್ನು ಕೊಡಿಸಿ ಮುಂದಿನ ವರ್ಷದ ಕಾರ್ಯಕ್ರಮದಂದು ಭವನ ನಿರ್ಮಾಣಕ್ಕೆ ಭೂಮಿಪೂಜೆ ಮಾಡುವುದಾಗಿ ಘೋಷಿಸಿದ ಸಚಿವ ನಾರಾಯಣಗೌಡ…
ಕೆ.ಆರ್.ಪೇಟೆ ತಾಲ್ಲೂಕಿನ ಇತಿಹಾಸದಲ್ಲಿ ಇದೇ ಪ್ರಥಮಬಾರಿಗೆ ಸವಿತಾ ಮಹರ್ಷಿಗಳ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವರು
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ವಿ.ರೂಪ, ಮೂಡಾ ಮಾಜಿಅಧ್ಯಕ್ಷ ಕೆ.ಶ್ರೀನಿವಾಸ್, ಜಿ.ಪಂ ಮಾಜಿಉಪಾಧ್ಯಕ್ಷ ಶೀಳನೆರೆ ಅಂಬರೀಶ್, ಪುರಸಭೆ ಅಧ್ಯಕ್ಷೆ ಮಹಾದೇವಿನಂಜುAಡ ಮತ್ತು ಸಮಾಜದ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: