ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ವಾಲ್ಮೀಕಿ ಭವನದ ಮುಂದುವರಿದ ಕಾಮಗಾರಿಗೆ ರೇಷ್ಮೆ ಯುವಜನ ಸಬಲೀಕರಣ ಹಾಗೂ , ಕ್ರೀಡಾ ಸಚಿವರಾದ ಡಾ.ಕೆ.ಸಿ. ನಾರಾಯಣಗೌಡ ಅವರು ಭೂಮಿ ಪೂಜೆ ನೆರವೇರಿಸಿದರು .
ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರಾದ ನಾರಾಯಣಗೌಡ ವಾಲ್ಮೀಕಿ ನಾಯಕ ಸಮುದಾಯದ ಬಂಧುಗಳು ನಾನು ಮೂರು ಭಾರಿ ಶಾಸಕನಾಗಿ ಆಯ್ಕೆಯಾಗಲು ಆಶೀರ್ವಾದ ಮಾಡಿದ್ದೀರಿ. ನಿಮ್ಮ ಈ ಋಣವನ್ನು ತೀರಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ನನ್ನ ಅಧಿಕಾರದ ಅವಧಿಯಲ್ಲಿ ನಾಯಕ ಸಮುದಾಯಕ್ಕೆ ಸರ್ಕಾರದ ವತಿಯಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಕೊಡಿಸಲು ಶಕ್ತಿಮೀರಿ ಶ್ರಮಿಸುತ್ತೇನೆ. ರಾಜ್ಯದ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಯ ಸಚಿವರಾದ ಶ್ರೀರಾಮುಲು ಅವರು ಅಕ್ಕಿಹೆಬ್ಬಾಳಿನ ವಾಲ್ಮೀಕಿ ಭವನದ ಮುಂದುವರೆದ ಕಾಮಗಾರಿಗೆ ಸುಮಾರು 70ಲಕ್ಷ ಅನುಧಾನ ನೀಡಿದ್ದಾರೆ. ಉಳಿಕೆ ಅನುಧಾನವನ್ನು ತಂದು ಕೊಡುವುದು ನನ್ನ ಜವಾಬ್ದಾರಿಯಾಗಿದೆ ಈಗ ಬಂದಿರುವ ಅನುಧಾನದಲ್ಲಿ ಗುಣಮಟ್ಟಡ ಕಾಮಗಾರಿಯನ್ನು ಗುತ್ತಿಗೆದಾರರಿಂದ ಮಾಡಿಸಿಕೊಳ್ಳಲು ಸಮುದಾಯದ ಮುಖಂಡರು ಮುಂದಾಗಬೇಕು. ಇದಲ್ಲದೇ ಎಲ್ಲೆಲ್ಲಿ ನಾಯಕ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದರೆ ಅಲ್ಲಿಗೆ ಸಮುದಾಯ ಭವನವು ಬೇಕು ಎಂದು ಹೇಳಿದರೆ ಅಗತ್ಯ ಅನುಧಾನ ಕೊಡಿಸಲು ನಾನು ಸಿದ್ದನಿದ್ದೇನೆ ಎಂದು ಹೇಳಿದರು.
ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಾಯಕ ಜಾತಿ ಸರ್ಟಿಫಿಕೇಟ್ ಪಡೆದುಕೊಳ್ಳಲು ಶಾಲಾ ದಾಖಲಾತಿ ಜೊತೆಗೆ ಕುಟುಂಬದ ದಾಖಲೆ ನೀಡಿ ಪಡೆದುಕೊಳ್ಳಬೇಕು ಈ ಬಗ್ಗೆ ತಹಸೀಲ್ದಾರ್ ಅವರಿಗೆ ಸೂಕ್ತ ದಾಖಲಾತಿ ನೀಡಿದರೆ ನಾಯಕ ಸರ್ಟಿಫಿಕೇಟ್ ನೀಡಲು ನಿರಾಕರಿಸಬಾರದು ಎಂದು ಆದೇಶ ನೀಡಿದ್ದೇನೆ ಇದಲ್ಲದೆ ಜೊತೆಗೆ ಯಾವುದೇ ಸಮಸ್ಯೆ ಇದ್ದಲ್ಲಿ ಯಾವುದೇ ಸಮಯದಲ್ಲಿ ನನ್ನನ್ನು ಬೇಟಿ ಮಾಡಬಹುದು ಎಂದು ಸಚವರು ಮನವಿ ಮಾಡಿದರು.
ಅಕ್ಕಿಹೆಬ್ಬಾಳು ಗ್ರಾಮ ಪಂಚಾಯತಿ ಅಧ್ಯಕ್ಷೆ ರಕ್ಷಿತಾದಿನೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೆ.ಆರ್.ಪೇಟೆ ತಾಲ್ಲೂಕು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಅಂಜನೀಗೌಡ
ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಎ.ಆರ್.ರಾಜಾನಾಯಕ್, ಗೌರವಾಧ್ಯಕ್ಷ ಕಾರಿಗನಹಳ್ಳಿ ಕುಮಾರ್, ಪುರಸಭೆಯ ಅಧ್ಯಕ್ಷೆ ಮಹಾದೇವಿನಂಜುAಡ, ಪುರಸಭಾ ಕೆ.ಆರ್.ನೀಲಕಂಠ, ತಾಲ್ಲೂಕು ಬಿಜೆಪಿ ಎಸ್.ಸಿ.ಮೋರ್ಚಾ ಅಧ್ಯಕ್ಷ ರವಿಶಿವಕುಮಾರ್, ಗ್ರಾ.ಪಂ.ಸದಸ್ಯರಾದ ಅಣ್ಣಯ್ಯ, ಬಿಜೆಪಿ ಎಸ್.ಟಿ.ಮೋರ್ಚಾ ಅದ್ಯಕ್ಷ ಮಹೇಶ್ ನಾಯಕ್, ಬಿಜೆಪಿ ಅಕ್ಕಿಹೆಬ್ಬಾಳು ಶಕ್ತಿ ಕೇಂದ್ರದ ಅಧ್ಯಕ್ಷ ಆರ್. ವಾಸು, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ