ಕೃಷ್ಣರಾಜಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಐಚನಹಳ್ಳಿ ಗ್ರಾಮದ ರೈತ ಮುಖಂಡ ಜನಪರ ಹೋರಾಟಗಾರ ಎಳನೀರು ವ್ಯಾಪಾರಿಯಾದ ಕೃಷ್ಣೇಗೌಡ(45) ಅವರ ಮೃತ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ…
ಐಚನಹಳ್ಳಿ ಗ್ರಾಮದ ನಂಜೇಗೌಡ ಅವರ ಮಗನಾದ ಕೃಷ್ಣೇಗೌಡ ತಮ್ಮ ಜಮೀನಿನ ಬಳಿ ಮರದ ಕೊಂಬೆಗೆ ಹಗ್ಗದಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಸ್ಥಿತಿಯಲ್ಲಿ ಮೃತ ದೇಹವು ಪತ್ತೆಯಾಗಿದೆ. ಆದರೆ ಐಚನಹಳ್ಳಿ ಗ್ರಾಮಸ್ಥರು ಕೃಷ್ಣೇಗೌಡ ಅವರದ್ದು ಸ್ವಾಭಾವಿಕ ಮರಣವಲ್ಲ, ಯಾರೋ ದುಷ್ಕರ್ಮಿಗಳು ಕೃಷ್ಣೇಗೌಡ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಸೀಬೆಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವಂತೆ ಬಿಂಬಿಸಲಾಗಿದೆ. ಈ ಘಟನೆಯ ಬಗ್ಗೆ ಸಮಗ್ರವಾದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆಯನ್ನು ಕೊಡಿಸಬೇಕು ರೈತ ಮುಖಂಡ ಬೂಕನಕೆರೆ ನಾಗರಾಜು ಆಗ್ರಹಿಸಿದ್ದಾರೆ…
ಘಟನೆಗೆ ಸಂಬಂಧಿಸಿದಂತೆ ಮೃತ ಕೃಷ್ಣೇಗೌಡರ ಪತ್ನಿ ಲತಾ ಗ್ರಾಮಾಂತರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ…
ರೈತಮುಖಂಡ ಕೃಷ್ಣೇಗೌಡ ಅವರ ಅಸಹಜ ಸಾವಿನ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆಯ ಪೋಲಿಸ್ ಇನ್ಸ್ ಪೆಕ್ಟರ್ ಕೆ.ಎಸ್.ನಿರಂಜನ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ..
ಕೃಷ್ಣೇಗೌಡರ ಮೃತ ದೇಹದ ಮರಣೋತ್ತರ ಪರೀಕ್ಷೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ರೈತಮುಖಂಡ ಕೃಷ್ಣೇಗೌಡ ಅವರ ಅಕಾಲಿಕ ನಿಧನಕ್ಕೆ ರೈತಮುಖಂಡ ಮುದುಗೆರೆ ರಾಜೇಗೌಡ, ಮಂಡ್ಯ ಜಿಲ್ಲಾ ರೈತಸಂಘದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಕೆ.ಆರ್.ಪೇಟೆ ತಾಲೂಕು ರೈತಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ, ಜಿಲ್ಲಾ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್ ತೀವ್ರ ಸಂತಾಪ ಸೂಚಿಸಿದ್ದಾರೆ.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ