May 2, 2024

Bhavana Tv

Its Your Channel

ಚಲೋ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ತೆರಳಿದ ನೂರಾರು ದಲಿತ ಮುಖಂಡರು

ಕೆ.ಆರ್.ಪೇಟೆ : ರಾಜ್ಯದ ದಲಿತಪರ ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಚಲೋ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ನೂರಾರು ದಲಿತ ಮುಖಂಡರು ಇಂದು ಕೆ.ಆರ್.ಪೇಟೆ ತಾಲ್ಲೂಕಿನ ದಲಿತ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಾಜಯ್ಯ ಅವರ ನೇತೃತ್ವದಲ್ಲಿ ಬೆಂಗಳೂರಿಗೆ ತೆರಳಿದರು…

ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನಮಾಡಿ ರಾಜ್ಯದ ದಲಿತರು ಹಾಗೂ ಶೋಷಿತರ ಅಪಮಾನ ಮಾಡಿರುವ ರಾಯಚೂರಿನ ಜಿಲ್ಲಾ ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಉಗ್ರವಾದ ಶಿಕ್ಷೆಗೆ ಒಳಪಡಿಸಿ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿದ ದಲಿತ ಮುಖಂಡರು ದೇಶಕ್ಕೆ ಸ್ವಾತಂತ್ರ‍್ಯ ಬಂದು 75 ವರ್ಷಗಳು ಕಳೆಯುತ್ತಿದ್ದರೂ ದಲಿತರ ಸ್ಥಿತಿಗತಿಗಳು ಇಂದಿಗೂ ಬದಲಾಗಿಲ್ಲ. ಅಸ್ಪೃಶ್ಯತೆ ಆಚರಣೆಯಂತಹ ಅನಿಷ್ಠ ಪದ್ದತಿಗಳು ಇಂದಿಗೂ ಜೀವಂತವಾಗಿವೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳು ಇಂದಿಗೂ ಈಡೇರಿಲ್ಲ. ದಲಿತರಿಗೆ ಸಾಮಾಜಿಕ ನ್ಯಾಯ ಎನ್ನುವುದು ಇಂದಿಗೂ ಮರೀಚಿಕೆಯಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ ದಲಿತ ಮುಖಂಡರು ದಲಿತರಿಗೆ ಸಮಾನತೆ ಹಾಗೂ ಸಾಮಾಜಿಕ ನ್ಯಾಯ, ರಾಜಕೀಯ ಸ್ಥಾನಮಾನಗಳು ದೊರೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ದಲಿತ ಮುಖಂಡರಾದ ಬಸ್ತಿರಂಗಪ್ಪ, ಡಿ.ಪ್ರೇಮಕುಮಾರ್, ಸೋಮಸುಂದರ್, ಹೊಸಹೊಳಲು ಪುಟ್ಟರಾಜು ಆಕ್ರೋಶ ವ್ಯಕ್ತಪಡಿಸಿದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: