May 3, 2024

Bhavana Tv

Its Your Channel

ಕಾಪನಹಳ್ಳಿ ಗವಿಮಠದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ಶ್ರೀ ಸ್ವತಂತ್ರ ಸಿದ್ಧಲಿಂಗೇಶ್ವರ ವಾರ್ಷಿಕ ಜಾತ್ರಾ ಮಹೋತ್ಸವ

ಕೆ.ಆರ್.ಪೇಟೆ ತಾಲ್ಲೂಕಿನ ಏಕೈಕ ಶರಣ ಶ್ರದ್ಧಾ ಕೇಂದ್ರವಾದ ಕಾಪನಹಳ್ಳಿ ಗವಿಮಠದಲ್ಲಿ ಶ್ರಧ್ಧಾಭಕ್ತಿಯಿಂದ ನಡೆದ ಸ್ವತಂತ್ರ ಸಿದ್ಧಲಿಂಗೇಶ್ವರವಾರ್ಷಿಕ ಜಾತ್ರಾ ಮಹೋತ್ಸವ..ಮುಗಿಲು ಮುಟ್ಟಿದ ಸಂಭ್ರಮ..ಮೊಳಗಿದ ಜಯಘೋಷಗಳು …

ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಹಾಗೂ ಶರಣ ಶ್ರದ್ಧಾಕೇಂದ್ರವಾದ ಕಾಪನಹಳ್ಳಿ ಗವಿಮಠದ ಶ್ರೀ ಸ್ವತಂತ್ರ ಸಿದ್ಧಲಿಂಗೇಶ್ವರ ವಾರ್ಷಿಕ ಜಾತ್ರಾ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ ನಡೆಯಿತು…

ಎಡೆಯೂರು ಸಿದ್ಧಲಿಂಗೇಶ್ವರರ ಸಮಕಾಲೀನರಾದ ಶ್ರೀ ಸ್ವತಂತ್ರ ಸಿದ್ಧಲಿಂಗೇಶ್ವರರು ಪವಾಡ ನಡೆಸಿ, ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ನಡೆಸಿ ಶ್ರೀಗಳು ಜೀವಂತವಾಗಿ ಸಮಾಧಿಯಾಗಿರುವ ಪವಿತ್ರ ಗದ್ದುಗೆಗೆ ಪೀಠಾಧಿಪತಿಗಳಾದ ಶ್ರೀ ಶ್ರೀ ಸ್ವತಂತ್ರ ಚನ್ನವೀರಯ್ಯಸ್ವಾಮೀಜಿಗಳು ವಿಶೇಷ ಪೂಜೆ ಸಲ್ಲಿಸಿದರು…

ಬಳ್ಳೇಕೆರೆ ಅಪ್ಪಾಜಿಗೌಡರ ವಂಶಸ್ಥರು ಹಾಗೂ ಕುಟುಂಬ ವರ್ಗದವರಿಂದ ಗದ್ದುಗೆಗೆ ವಿಶೇಷ ಪೂಜೆ ಪುರಸ್ಕಾರವನ್ನು ಏರ್ಪಡಿಸಲಾಗಿತ್ತು…

ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಉಚಿತ ಪ್ರಸಾದ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ. ಮಂಡ್ಯ

error: