May 3, 2024

Bhavana Tv

Its Your Channel

ವಿಜೃಂಭಣೆಯಿOದ ನಡೆದ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ಬ್ರಹ್ಮರಥೋತ್ಸವ

ಕೃಷ್ಣರಾಜಪೇಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದ ಪುರಾಣ ಪ್ರಸಿದ್ಧವಾದ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ’ಯವರ ಬ್ರಹ್ಮರಥೋತ್ಸವವು ಸಡಗರ ಸಂಭ್ರಮದಿAದ ವಿಜೃಂಭಣೆಯಿAದ ನಡೆಯಿತು ..

ಗೋವಿಂದ, ವೆಂಕಟರಮಣ, ನಮೋ ನಾರಾಯಣ, ನಮೋ ವೆಂಕಟೇಶ ಎಂಬ ಜಯಘೋಷಗಳು ಮುಗಿಲು ಮುಟ್ಟಿದ್ದವು…ತಹಶೀಲ್ದಾರ್ ಎಂ.ವಿ.ರೂಪ, ಪುರಸಭೆಯ ಅಧ್ಯಕ್ಷೆ ಮಹಾದೇವಿನಂಜುAಡ, ಉಪಾಧ್ಯಕ್ಷೆ ಗಾಯತ್ರಿಸುಬ್ಬಣ್ಣ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಶೋಕ್ ಅವರು ಶ್ರೀ ರಥದಲ್ಲಿ ವಿರಾಜಮಾನವಾಗಿದ್ದ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು…

ತಹಶೀಲ್ದಾರ್ ರೂಪ ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ ಹಬ್ಬ ಹರಿದಿನಗಳು ಹಾಗೂ ರಥೋತ್ಸವಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿವೆ. ಹಬ್ಬದ ಸಂಭ್ರಮದಲ್ಲಿ ಎಲ್ಲರೂ ಒಂದಾಗಿ ಭಗವಂತನ ನಾಮಸ್ಮರಣೆ ಮಾಡಿದಾಗ ಮನಸ್ಸಿಗೆ ಶಾಂತಿ ನೆಮ್ಮದಿಯು ದೊರೆಯುವ ಜೊತೆಗೆ ಸಾರ್ಥಕತಾ ಭಾವನೆಯು ಮೂಡುತ್ತದೆ ಎಂದು ಹೇಳಿದರು..

ಪುರಸಭೆಯ ಮುಖ್ಯಾಧಿಕಾರಿ ಕುಮಾರ್, ಸದಸ್ಯರಾದ ಹೆಚ್.ಆರ್.ಲೋಕೇಶ್, ಹೆಚ್.ಡಿ.ಅಶೋಕ್, ಶಾಮಿಯಾನತಿಮ್ಮೇಗೌಡ, ಗಿರೀಶ್, ಕೆ.ಆರ್.ಹೇಮಂತ್ ಕುಮಾರ್, ಡಿ.ಪ್ರೇಮಕುಮಾರ್, ರವೀಂದ್ರಬಾಬು, ಕಲ್ಪನಾದೇವರಾಜು, ಶೋಭಾ, ರಾಜಶ್ವನಿರೀಕ್ಷಕಿ ಚಂದ್ರಕಲಾ, ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಸಮಾಜಸೇವಕರಾದ ಕೆ.ಜಿ.ಸೋಮಶೇಖರ್ ಸೇರಿದಂತೆ ಸಾವಿರಾರು ಜನರು ರಥೋತ್ಸವದಲ್ಲಿ ಭಾಗವಹಿಸಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: