ಕೃಷ್ಣರಾಜಪೇಟೆ ತಾಲ್ಲೂಕಿನ ನಗರೂರು-ಮಾರ್ಗೋನಹಳ್ಳಿ ಅವಳಿ ಗ್ರಾಮಗಳ ಸಮೀಪದಲ್ಲಿರುವ ಹಾಲುಮತ ಕುರುಬ ಸಮಾಜದ ಆರಾಧ್ಯದೈವ ಮರಡಿಲಿಂಗೇಶ್ವರ ಕ್ಷೇತ್ರದಲ್ಲಿ ಚಿಕ್ಕಯ್ಯ- ದೊಡ್ಡಯ್ಯ ಜೋಡಿರಥಗಳ ವೈಭವದ ಬ್ರಹ್ಮರಥೋತ್ಸವ .. ಮುಗಿಲು ಮುಟ್ಟಿದ ಸಂಭ್ರಮ..ಮೊಳಗಿದ ಜಯಘೋಷಗಳು ..
ಸಚಿವ ನಾರಾಯಣಗೌಡ ರಥೋತ್ಸವದಲ್ಲಿ ಭಾಗಿಯಾಗಿದ್ದರು.
ಕುರಿಗಳಿಂದ ಮರಡಿಲಿಂಗೇಶ್ವರ ದೇವಾಲಯದ ಸುತ್ತಲೂ ಮೂರು ಸುತ್ತು ಪ್ರದಕ್ಷಿಣೆ ಹಾಕಿ ಭಕ್ತಿಯ ಸಮರ್ಪಣೆ.ಉಘೇ ದೊಡ್ಡಯ್ಯ..ಉಘೇ ಚಿಕ್ಕಯ್ಯ…ಎಂದು ಮುಗಿಲು ಮುಟ್ಟಿದ ಜಯಘೋಷಗಳು…
ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ ೧೦ ಸಾವಿರಕ್ಕೂ ಹೆಚ್ಚಿನ ಭಕ್ತರು ಜೋಡಿ ರಥೋತ್ಸವದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು
ಹಾಲುಮತ ಕುರುಬ ಸಮಾಜದ ಮುಖಂಡರು ಹಾಗೂ ಮರಡಿಲಿಂಗೇಶ್ವರ ಸ್ವಾಮಿಯ ಒಕ್ಕಲಿಗೆ ಸೇರಿದ ಹೆಗಡಿ ಕೆ.ಎನ್.ಕೃಷ್ಣ, ಮೂಡಾ ಮಾಜಿಅಧ್ಯಕ್ಷ ಕೆ.ಶ್ರೀನಿವಾಸ್, ಪುರಸಭೆ ಸದಸ್ಯ ಕೆ.ಶ್ರೀನಿವಾಸ್, ಎಪಿಎಂಸಿ ಮಾಜಿನಿರ್ದೇಶಕ ಕೆ.ವೇಣುಗೋಪಾಲ, ಕೆ.ಪುರುಷೋತ್ತಮ, ಮಾರ್ಗೋನಹಳ್ಳಿ ತಮ್ಮಯ್ಯ, ನಂಜೇಗೌಡ, ಆದಿಹಳ್ಳಿ ಮೀನಾಕ್ಷಿ, ಕಾರಿಗನಹಳ್ಳಿ ಕುಮಾರ್ ಮತ್ತಿತರರು ರಥೋತ್ಸವದಲ್ಲಿ ಭಾಗವಹಿಸಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ