May 4, 2024

Bhavana Tv

Its Your Channel

ಕೆ.ಆರ್.ಪೇಟೆ ಪುರಸಭೆಗೆ 500 ಮನೆಗಳು ಮಂಜೂರು, ಸಚಿವ ನಾರಾಯಣಗೌಡ ಅವರಿಂದ ಭೂಮಿಪೂಜೆ

ಕೆ.ಆರ್.ಪೇಟೆ ಪಟ್ಟಣದ ಮುಸ್ಲಿಂ ಬ್ಲಾಕ್ ಕಾಲೋನಿಯಲ್ಲಿ ಕರ್ನಾಟಕ ಕೊಳೆಗೇರಿ ಮಂಡಳಿಯ ವತಿಯಿಂದ 500 ಮನೆಗಳ ನಿರ್ಮಾಣಕ್ಕೆ ಸಚಿವ ಡಾ.ನಾರಾಯಣಗೌಡ ಅವರಿಂದ ಭೂಮಿಪೂಜೆ ನೆರವೇರಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಕಾರ್ಯಕ್ರಮದ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 6,25,000 ವೆಚ್ಚದಲ್ಲಿ ಮೂರೂವರೇ ಚದರ ವಿಸ್ತೀರ್ಣದ ಮನೆಗಳ ನಿರ್ಮಾಣ ವಸತಿ ರಹಿತ ಬಡಜನರು ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಲು ಸಚಿವರ ಮನವಿ

ಕರ್ನಾಟಕ ರಾಜ್ಯದಲ್ಲಿ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯ ಆಶ್ರಯದಲ್ಲಿ 1,80,000 ಮನೆಗಳು 2022-23 ನೇ ಸಾಲಿನಲ್ಲಿ ನಿರ್ಮಾಣವಾಗುತ್ತಿದ್ದು ಕೆ.ಆರ್.ಪೇಟೆ ಪಟ್ಟಣದ ಜನತೆಗಾಗಿ 500 ಮನೆಗಳನ್ನು ಮಂಜೂರು ಮಾಡಿಸಲಾಗಿದೆ. ಪಟ್ಟಣದ ಬಡಜನರು ಹಾಗೂ ಮಧ್ಯಮ ವರ್ಗದ ಕುಟುಂಬಗಳು ಸರ್ವರಿಗೂ ಸೂರು ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಸ್ವಂತಸೂರು ಹೊಂದಬೇಕೆAಬ ಕನಸನ್ನು ನನಸು ಮಾಡಿಕೊಳ್ಳಬೇಕು ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು..

ಪ್ರಧಾನಮಂತ್ರಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಕಾರ್ಯಕ್ರಮದ ಅಡಿಯಲ್ಲಿ ಕೆ.ಆರ್.ಪೇಟೆ ಪುರಸಭೆಗೆ 31 ಕೋಟಿ ರೂಪಾಯಿಗಳ ವೆಚ್ಚದಲ್ಲಿ 500 ಮನೆಗಳು ಮಂಜೂರಾಗಿವೆ . 6,25,000 ವೆಚ್ಚದ ಮೂರೂವರೆ ಚದರ ವಿಸ್ತೀರ್ಣದ ಮನೆ ಯೋಜನೆಯನ್ನು ಪಡೆಯಲು ಪ್ರತೀ ಫಲಾನುಭವಿಯು ಯೋಜನೆಯ ವೆಚ್ಚದ ಶೇ.10ರಷ್ಟು ಹಣದ ಬಾಬ್ತು 62,500 ರೂಗಳನ್ನು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಪಾವತಿಸಿದರೆ ಪರಿಶಿಷ್ಠ ಜಾತಿ ಹಾಗೂ ವರ್ಗಗಳ ಜನರಿಗೆ 3,50,000 ಸಹಾಯ ಧನ ದೊರೆತರೆ ಇತರೆ ಜನರಿಗೆ 2,70,000 ರೂ ಸಹಾಯ ಧನವು ದೊರೆಯಲಿದ್ದು ಉಳಿದ ಬಾಕಿ ಹಣವನ್ನು ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಸುಲಭವಾಗಿ ಸಾಲಸೌಲಭ್ಯವು ದೊರೆಯಲಿದೆ ಎಂದು ಪುರಸಭೆ ಅಧ್ಯಕ್ಷೆ ಮಹಾದೇವಿನಂಜುAಡ ಮಾಹಿತಿ ನೀಡಿ ಪಟ್ಟಣದಲ್ಲಿ ಸ್ವಂತ ಮನೆ ಹೊಂದಿಲ್ಲದ ಜನರು ಯೋಜನೆಯ ಫಲಾನುಭವಿಗಳಾಗಿ ಸ್ವಂತ ಮನೆಯ ಕನಸನ್ನು ನನಸು ಮಾಡಿಕೊಳ್ಳಬೇಕು ಎಂದು ಮಹಾದೇವಿ ಕೈಮುಗಿದು ಮನವಿ ಮಾಡಿದರು ..

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿಅಧ್ಯಕ್ಷ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಮಾಜಿಉಪಾಧ್ಯಕ್ಷ ಶೀಳನೆರೆ ಅಂಬರೀಶ್, ಪುರಸಭೆ ಅಧ್ಯಕ್ಷೆ ಮಹಾದೇವಿ, ಉಪಾಧ್ಯಕ್ಷೆ ಗಾಯತ್ರಿ, ಸದಸ್ಯರಾದ ಶಾಮಿಯಾನ ತಿಮ್ಮೇಗೌಡ, ಡಾ.ಕೆ.ಎಸ್.ರಾಜೇಶ್, ಹೆಚ್.ಆರ್.ಲೋಕೇಶ್, ಶುಭಾ ಗಿರೀಶ್, ಶೋಭಾದಿನೇಶ್, ಮುಖ್ಯಾಧಿಕಾರಿ ಕುಮಾರ್, ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಾರ್ಯಪಾಲಕ ಎಂಜಿನಿಯರ್ ಜಿ.ಹರೀಶ್, ಎಇಇ ಬಿ.ಕೆ.ಬೋರಯ್ಯ, ಸಹಾಯಕ ಎಂಜಿನಿಯರ್ ನಂದೀಶ್, ಪುರಸಭೆಯ ಸಹಾಯಕ ಎಂಜಿನಿಯರ್ ಮಧುಸೂದನ್, ಪರಿಸರ ಎಂಜಿನಿಯರ್ ಅರ್ಚನಾ ಆರಾಧ್ಯ ಮತ್ತಿತರರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: