ಕೆ.ಆರ್.ಪೇಟೆ:-ಗೌರವ ಧನ ಹೆಚ್ಚಳಕ್ಕಾಗಿ ಒತ್ತಾಯಿಸಿ ರಾಜ್ಯದ ಎಲ್ಲಾ ಶಾಸಕರು ಹಾಗೂ ಸಚಿವರ ಮನೆಯ ಮುಂಭಾಗ ಮೇ. 04 ರಂದು ಬಿಸಿಯೂಟ ತಯಾರಕರ ಪ್ರತಿಭಟನೆ..ಹಾಗೂ ಧರಣಿ ಸತ್ಯಾಗ್ರಹ.. ಬಿಸಿಯೂಟ ತಯಾರಕರ ಸಂಘದ ಜಿಲ್ಲಾಧ್ಯಕ್ಷೆ ಮತ್ತು ರಾಜ್ಯ ಕಾರ್ಯದರ್ಶಿಗಳಾದ ಮಹದೇವಮ್ಮ ಅವರಿಂದ ಕೆ.ಆರ್.ಪೇಟೆಯಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಘೋಷಣೆ ಮಾಡಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮಧ್ಯಾಹ್ನದ ಬಿಸಿಯೂಟ ತಯಾರಕರ ಕೆಲಸವನ್ನು ಖಾಯಂಗೊಳಿಸಿ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಬಿಸಿಯೂಟ ತಯಾರಕರ ಸೇವೆಯನ್ನು ಮಾನವೀಯ ನೆಲೆಗಟ್ಟಿನಲ್ಲಿ ಪರಿಗಣಿಸಿ 60 ವರ್ಷ ತುಂಬಿದ ಬಿಸಿಯೂಟ ತಯಾರಕ ಮಹಿಳೆಯರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಬಾರದು ಎಂದು ಮಂಡ್ಯ ಜಿಲ್ಲಾ ಮಧ್ಯಾಹ್ನದ ಬಿಸಿಯೂಟ ತಯಾರಕರ ಸಂಘದ ಜಿಲ್ಲಾಧ್ಯಕ್ಷೆ ಮಹದೇವಮ್ಮ ಆಗ್ರಹಿಸಿದರು…
ಅವರು ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ತಾಲ್ಲೂಕಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಬಿಸಿಯೂಟ ತಯಾರಕರ ಸಭೆಯ ನೇತೃತ್ವ ವಹಿಸಿ ಮಾತನಾಡಿದರು…
ಕೇವಲ ದಿನಕ್ಕೆ 10 ರೂ ಗೌರವಧನ ಪಡೆದುಕೊಂಡು ತಮ್ಮ ವೃತ್ತಿ ಜೀವನವನ್ನು ಆರಂಬಿಸಿದ ಬಿಸಿಯೂಟ ತಯಾರಕ ಮಹಿಳೆಯರು ಬಡಕುಟುಂಬಕ್ಕೆ ಸೇರಿರುವ ನಿರ್ಗತಿಕ, ವಿಶೇಷಚೇತನ ಹಾಗೂ ವಿಧವಾ ಮಹಿಳೆಯರಾಗಿದ್ದಾರೆ.
ಕಳೆದ 19 ವರ್ಷಗಳಿಂದ ಬಿಸಿಯೂಟ ತಯಾರಿಕಾ ಕೆಲಸವನ್ನು ಮಾಡುತ್ತಿರುವ ಮಹಿಳೆಯರಿಗೆ ರಾಜ್ಯ ಸರ್ಕಾರವು ಕೇವಲ 2,600ರೂ, 2,700ರೂ ಗೌರವ ಧನವನ್ನು ಮಾತ್ರ ನೀಡುತ್ತಿದೆ. ಸಿಐಟಿಯು ನೇತೃತ್ವದಲ್ಲಿ ಬಿಸಿಯೂಟ ತಯಾರಕರು ನಡೆಸಿದ ಹೋರಾಟದ ಫಲವಾಗಿ ಈಗ ಮಾಸಿಕ ಒಂದು ಸಾವಿರ ರೂ ಗೌರವ ಧನವನ್ನು ಹೆಚ್ಚಿಸಲು ಒಪ್ಪಿರುವ ಸರ್ಕಾರವು 2022ರ ಜನವರಿ ತಿಂಗಳಿನಿAದ ಒಂದು ಸಾವಿರ ರೂ ಹೆಚ್ಚಿನ ಗೌರವ ಧನ ನೀಡದೇ ಜೂನ್ ತಿಂಗಳಿನಿAದ ಗೌರವ ಧನ ಹೆಚ್ಚಿಸುವುದಾಗಿ ಮೊಂಡಾಟ ಮಾಡುತ್ತಿದೆ. ಕಳೆದ 19 ವರ್ಷಗಳಿಂದ ಸೇವೆ ಸಲ್ಲಿಸಿ ಈಗ 60 ವರ್ಷ ತುಂಬಿತೆAದು ಕೆಲಸ ಕಳೆದುಕೊಂಡು ಖಾಲಿ ಕೈಯ್ಯಲ್ಲಿ ಮನೆಗೆ ಹೋಗುತ್ತಿರುವ ಬಿಸಿಯೂಟ ತಯಾರಕ ಮಹಿಳೆಯರಿಗೆ ತಲಾ 01 ಲಕ್ಷರೂ ಸಹಾಯ ಧನ ನೀಡುವ ಜೊತೆಗೆ ಮಾಸಿಕ 3 ಸಾವಿರ ರೂ ಪಿಂಚಣಿ ಹಣ ನೀಡಬೇಕು ಎಂದು ಒತ್ತಾಯಿಸಿದ ಮಹದೇವಮ್ಮ ಮೇ 4ರಂದು ಆಯಾ ಕ್ಷೇತ್ರದ ಶಾಸಕರ ಮನೆಯ ಮುಂದೆ ಗೌರವ ಸಂಭಾವನೆಯ ಪ್ರತಿಭಟನೆ ನಡೆಸಲಿದ್ದು ಮೇ.10 ರಂದು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿ ಉಗ್ರವಾದ ಪ್ರತಿಭಟನೆ ನಡೆಸಲಿದ್ದೇವೆ. ರಾಜ್ಯ ಸರ್ಕಾರವು ಮಾನವೀಯ ನೆಲೆಗಟ್ಟಿನ ಆಧಾರದ ಮೇಲೆ ಬಿಸಿಯೂಟ ತಯಾರಕರ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಶಾಶ್ವತವಾದ ಪರಿಹಾರ ಕಂಡು ಹಿಡಿಯಬೇಕು ಎಂದು ಮಹದೇವಮ್ಮ ಆಗ್ರಹಿಸಿದರು…
ಸಭೆಯಲ್ಲಿ ಬಿಸಿಯೂಟ ತಯಾರಕರ ಸಂಘದ ಕೆ.ಆರ್.ಪೇಟೆ ತಾಲ್ಲೂಕು ಘಟಕದ ಅಧ್ಯಕ್ಷೆ ಭಾಗ್ಯಮ್ಮ, ಕಾರ್ಯದರ್ಶಿ ಲಕ್ಷ್ಮಮ್ಮ , ಪದಾಧಿಕಾರಿಗಳಾದ ವಸಂತಮ್ಮ, ಲಕ್ಷ್ಮಮ್ಮ, ಗೀತಮ್ಮ, ಪ್ರಭಾ, ಭಾಗ್ಯ ಸೇರಿದಂತೆ ನೂರಾರು ಜನ ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ