ಕೆ.ಆರ್.ಪೇಟೆ ತಾಲ್ಲೂಕು ಛಲವಾಧಿ ಮಹಾಸಭಾದ ನೂತನ ಅಧ್ಯಕ್ಷರಾಗಿ ಜನಪರ ಹೋರಾಟಗಾರ ಊಚನಹಳ್ಳಿ ನಟರಾಜ್ ಅವಿರೋಧ ಆಯ್ಕೆ ಯಾಗಿದ್ದಾರೆ. ಛಲವಾಧಿ ಮಹಾಸಭಾದ ಸಂಸ್ಥಾಪಕ ಅಧ್ಯಕ್ಷ ಕೆ.ಶಿವರಾಮ್ ಅಭಿನಂದಿಸಿದರು.
ಕೃಷ್ಣರಾಜಪೇಟೆ ತಾಲ್ಲೂಕು ಛಲವಾಧಿ ಮಹಾಸಭಾದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜನಪರ ಹೋರಾಟಗಾರ, ಬಡವರು ಹಾಗೂ ದೀನದಲಿತರ ಸೇವೆಯಲ್ಲಿ ಭಗವಂತನನ್ನು ಕಾಣುತ್ತಿರುವ ಯುವಮುಖಂಡ ಊಚನಹಳ್ಳಿ ನಟರಾಜು ಅವರನ್ನು ರಾಜ್ಯ ಛಲವಾಧಿ ಮಹಾಸಭಾದ ಸಂಸ್ಥಾಪಕ ಅಧ್ಯಕ್ಷ ವಿಶ್ರಾಂತ ಐಎಎಸ್ ಅಧಿಕಾರಿ ಕೆ.ಶಿವರಾಮ್ ಸನ್ಮಾನಿಸಿ ಗೌರವಿಸಿದರು.
ಮಂಡ್ಯ ಜಿಲ್ಲಾ ಛಲವಾಧಿ ಮಹಾಸಭಾದ ಅಧ್ಯಕ್ಷ ಮಾಂಬಳ್ಳಿ ಜಯರಾಂ, ಪುರಸಭೆ ಹಿರಿಯ ಸದಸ್ಯ ಡಿ.ಪ್ರೇಮಕುಮಾರ್, ಕೃಷ್ಣರಾಜಪೇಟೆ ತಾಲ್ಲೂಕಿನ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಾಜಯ್ಯ, ಎಪಿಎಂಸಿ ಮಾಜಿನಿರ್ದೇಶಕ ಸಿಂದಘಟ್ಟ ಸೋಮಸುಂದರ್, ಪುರಸಭೆ ಸದಸ್ಯರಾದ ಕಲ್ಪನಾದೇವರಾಜು, ಸೌಭಾಗ್ಯ ಉಮೇಶ್, ನಿಕಟಪೂರ್ವ ಅಧ್ಯಕ್ಷ ಮುದುಗೆರೆ ಮಹೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಡಾ.ಕೆ.ಆರ್.ನೀಲಕಂಠ. ಕೆ.ಆರ್.ಪೇಟೆ...
More Stories
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ
ದೇವಿರಮ್ಮಣ್ಣೆ ಕೆರೆ ಅಂಗಳಕ್ಕೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಬಾಂಧವರು