ಕೆ.ಆರ್.ಪೇಟೆ ಪಟ್ಟಣದ ಹೊಸ ಕಿಕ್ಕೇರಿ ರಸ್ತೆ(ಪುನೀತ್ ರಾಜಕುಮಾರ್) ಮತ್ತು ಹಳೆ ಕಿಕ್ಕೇರಿ ರಸ್ತೆ(ಡಾ.ಬಿ.ಆರ್.ಅಂಬೇಡ್ಕರ್) ಗಳ ಗುಂಡಿ ಮುಚ್ಚುವ ಕಾಮಗಾರಿಗೆ ಪುರಸಭೆ ಮುಖ್ಯಾಧಿಕಾರಿ ಕುಮಾರ್ ಚಾಲನೆ ನೀಡಿದರು ..
ಕೃಷ್ಣರಾಜಪೇಟೆ ಪಟ್ಟಣದಲ್ಲಿ ಜನರು ಅತಿ ಹೆಚ್ಚಾಗಿ ಬಳಸುವ ಹಾಗೂ ಕ್ಷೇತ್ರದ ಶಾಸಕರು ರಾಜ್ಯದ ರೇಷ್ಮೆ ಮತ್ತು ಕ್ರೀಡಾ ಸಚಿವರಾದ ಡಾ.ನಾರಾಯಣಗೌಡರ ಮನೆಗೆ ಹೋಗುವ ರಸ್ತೆಯಾದ್ದರಿಂದ ಈ ಎರಡೂ ರಸ್ತೆಗಳಲ್ಲಿ ಸಂಚರಿಸುವ ನಾಗರೀಕರು ಹಾಗೂ ಶ್ರೀ ಸಾಮಾನ್ಯರು ಪುರಸಭೆ ಆಡಳಿತ ಮಂಡಳಿಗೆ ಹಾಗೂ ಶಾಸಕರಿಗೆ ಹಿಡಿಶಾಫವನ್ನು ಹಾಕುತ್ತಿದ್ದರು..ಹಳೇ ಕಿಕ್ಕೇರಿ ರಸ್ತೆ ಹಾಗೂ ಹೊಸ ಕಿಕ್ಕೇರಿ ರಸ್ತೆಗಳ ಅಭಿವೃದ್ಧಿಗೆ ಸಚಿವರು ವಿಶೇಷ ಅನುದಾನ ಬಿಡುಗಡೆ ಮಾಡಿಸಿದ್ದು ಹೈಟೆಕ್ ಗುಣಮಟ್ಟದ ರಸ್ತೆಯ ಕಾಮಗಾರಿಯು ಸಧ್ಯದಲ್ಲಿಯೇ ಆರಂಭವಾಗಲಿದೆ. ಶ್ರೀ ಸಾಮಾನ್ಯರು, ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನಗಳ ಓಡಾಟಕ್ಕೆ ಅನುಕೂಲವಾಗಲೆಂದು ಪುರಸಭೆ ನಿಧಿಯಿಂದಲೇ ಗುಂಡಿ ಮುಚ್ಚಲು ನಿರ್ಧರಿಸಿ ವೆಟ್ ಸಿಮೆಂಟ್ ಕಾಂಕ್ರೀಟ್ ಮಿಕ್ಸ್ ಬಳಸಿ ರಸ್ತೆಯ ಗುಂಡಿಗಳನ್ನು ಮುಚ್ಚಿಸಿ ಜನರಿಗೆ ಅನುಕೂಲ ಮಾಡಿಕೊಡುತ್ತಿದ್ದೇವೆ ಎಂದು ಮುಖ್ಯಾಧಿಕಾರಿ ಕುಮಾರ್ ವಿವರಿಸಿದರು..ಈ ಸಂದರ್ಭದಲ್ಲಿ ಮುಖಂಡರಾದ ನಂಜುAಡ, ಚೆಲುವರಾಜು, ಕೆ.ಎಸ್.ರಾಜೇಶ್, ಡಿ.ಪ್ರೇಮಕುಮಾರ್ ಮತ್ತಿತರರು ಉಪಸ್ಥಿತರಿದ್ದರು..
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ