May 6, 2024

Bhavana Tv

Its Your Channel

ಕೆ.ಆರ್.ಪೇಟೆ ಪಟ್ಟಣದ ಹೊಸ ಕಿಕ್ಕೇರಿ ರಸ್ತೆ ಮತ್ತು ಹಳೆ ಕಿಕ್ಕೇರಿ ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿಗೆ ಪುರಸಭೆ ಮುಖ್ಯಾಧಿಕಾರಿ ಕುಮಾರ್ ಚಾಲನೆ

ಕೆ.ಆರ್.ಪೇಟೆ ಪಟ್ಟಣದ ಹೊಸ ಕಿಕ್ಕೇರಿ ರಸ್ತೆ(ಪುನೀತ್ ರಾಜಕುಮಾರ್) ಮತ್ತು ಹಳೆ ಕಿಕ್ಕೇರಿ ರಸ್ತೆ(ಡಾ.ಬಿ.ಆರ್.ಅಂಬೇಡ್ಕರ್) ಗಳ ಗುಂಡಿ ಮುಚ್ಚುವ ಕಾಮಗಾರಿಗೆ ಪುರಸಭೆ ಮುಖ್ಯಾಧಿಕಾರಿ ಕುಮಾರ್ ಚಾಲನೆ ನೀಡಿದರು ..

ಕೃಷ್ಣರಾಜಪೇಟೆ ಪಟ್ಟಣದಲ್ಲಿ ಜನರು ಅತಿ ಹೆಚ್ಚಾಗಿ ಬಳಸುವ ಹಾಗೂ ಕ್ಷೇತ್ರದ ಶಾಸಕರು ರಾಜ್ಯದ ರೇಷ್ಮೆ ಮತ್ತು ಕ್ರೀಡಾ ಸಚಿವರಾದ ಡಾ.ನಾರಾಯಣಗೌಡರ ಮನೆಗೆ ಹೋಗುವ ರಸ್ತೆಯಾದ್ದರಿಂದ ಈ ಎರಡೂ ರಸ್ತೆಗಳಲ್ಲಿ ಸಂಚರಿಸುವ ನಾಗರೀಕರು ಹಾಗೂ ಶ್ರೀ ಸಾಮಾನ್ಯರು ಪುರಸಭೆ ಆಡಳಿತ ಮಂಡಳಿಗೆ ಹಾಗೂ ಶಾಸಕರಿಗೆ ಹಿಡಿಶಾಫವನ್ನು ಹಾಕುತ್ತಿದ್ದರು..ಹಳೇ ಕಿಕ್ಕೇರಿ ರಸ್ತೆ ಹಾಗೂ ಹೊಸ ಕಿಕ್ಕೇರಿ ರಸ್ತೆಗಳ ಅಭಿವೃದ್ಧಿಗೆ ಸಚಿವರು ವಿಶೇಷ ಅನುದಾನ ಬಿಡುಗಡೆ ಮಾಡಿಸಿದ್ದು ಹೈಟೆಕ್ ಗುಣಮಟ್ಟದ ರಸ್ತೆಯ ಕಾಮಗಾರಿಯು ಸಧ್ಯದಲ್ಲಿಯೇ ಆರಂಭವಾಗಲಿದೆ. ಶ್ರೀ ಸಾಮಾನ್ಯರು, ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನಗಳ ಓಡಾಟಕ್ಕೆ ಅನುಕೂಲವಾಗಲೆಂದು ಪುರಸಭೆ ನಿಧಿಯಿಂದಲೇ ಗುಂಡಿ ಮುಚ್ಚಲು ನಿರ್ಧರಿಸಿ ವೆಟ್ ಸಿಮೆಂಟ್ ಕಾಂಕ್ರೀಟ್ ಮಿಕ್ಸ್ ಬಳಸಿ ರಸ್ತೆಯ ಗುಂಡಿಗಳನ್ನು ಮುಚ್ಚಿಸಿ ಜನರಿಗೆ ಅನುಕೂಲ ಮಾಡಿಕೊಡುತ್ತಿದ್ದೇವೆ ಎಂದು ಮುಖ್ಯಾಧಿಕಾರಿ ಕುಮಾರ್ ವಿವರಿಸಿದರು..ಈ ಸಂದರ್ಭದಲ್ಲಿ ಮುಖಂಡರಾದ ನಂಜುAಡ, ಚೆಲುವರಾಜು, ಕೆ.ಎಸ್.ರಾಜೇಶ್, ಡಿ.ಪ್ರೇಮಕುಮಾರ್ ಮತ್ತಿತರರು ಉಪಸ್ಥಿತರಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

error: