ಕೃಷ್ಣರಾಜಪೇಟೆ ತಾಲ್ಲೂಕು ಅಕ್ಕಿಹೆಬ್ಬಾಳು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಾಚಹೊಳಲು ನಾಗೇಶ್ವರಿ ಅವಿರೋಧವಾಗಿ ಆಯ್ಕೆಯಾದರು ..
ಈ ಹಿಂದೆ ಅಧ್ಯಕ್ಷರಾಗಿದ್ದ ರಕ್ಷಿತ ದಿನೇಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗೇಶ್ವರಿ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರವನ್ನು ಸಲಿಸದ ಕಾರಣ ಚುನಾವಣಾಧಿಕಾರಿಗಳಾದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು…
23 ಸದಸ್ಯರ ಬಲದ ಅಕ್ಕಿಹೆಬ್ಬಾಳು ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ 18 ಸದಸ್ಯರು ನಾಗೇಶ್ವರಿ ಅವರನ್ನು ಬೆಂಬಲಿಸಿದ ಕಾರಣ ಜೆಡಿಎಸ್ ಕಾಂಗ್ರೆಸ್ ಬೆಂಬಲಿತ ಸದಸ್ಯರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡದ ಕಾರಣ ಬಿಜೆಪಿ ಬೆಂಬಲಿತ ಸದಸ್ಯೆ ಅವಿರೋಧವಾಗಿ ಆಯ್ಕೆಯಾದರು..
ನೂತನ ಅಧ್ಯಕ್ಷರ ಆಯ್ಕೆಯು ಪ್ರಕಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಚಿವ ನಾರಾಯಣಗೌಡರ ಆಪ್ತಸಹಾಯಕರಾದ ದಯಾನಂದ ಅವರ ನೇತೃತ್ವದಲ್ಲಿ ಪಟಾಕಿಗಳನ್ನು ಸಿಡಿಸಿ ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು..
ಅಕ್ಕಿಹೆಬ್ಬಾಳು ಗ್ರಾಮ ಪಂಚಾಯತಿಗೆ ಪ್ರಭಾರ ಅಧ್ಯಕ್ಷರಾಗಿದ್ದ ಉಪಾಧ್ಯಕ್ಷ ರಾಜಕುಮಾರ್ ಜಾಧವ್ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು..
ಇAದು ನಡೆದ ಚುನಾವಣೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಎಸ್.ಎಂ.ರಕ್ಷಿತ, ರಮೇಶ್, ಎ.ಕೆ.ಹರೀಶ್, ಜಯಶೀಲ, ಪಿ.ರಾಧ, ಎ.ಸತೀಶ್, ಸಿ.ವಿ.ಪಲ್ಲವಿ, ದೇವಮ್ಮ, ರಿಹಾನಬೇಗಂ, ಡಿ.ಎಸ್.ಮನು, ಟಿ.ಅಣ್ಣಯ್ಯ, ನಾಗಯ್ಯ, ಸಿ.ಕೆ.ಆಶಾ, ಸೌಮ್ಯ, ಮುಖಂಡರಾದ ಬಿಗ್ ಬಾಸ್ ಮೋಹನ್, ಮಡವಿನಕೋಡಿ ಪ್ರವೀಣ್, ಎ.ಜೆ.ದಿವಾಕರ್, ವಿಠಲಾಪುರ ದೇವರಾಜ್, ಜೈನಹಳ್ಳಿ ಗೌಡಪ್ಪ, ಎ.ಬಿ.ಮಹೇಶ್ ಕುಮಾರ್, ಮತ್ತಿತರರು ಉಪಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ