April 29, 2024

Bhavana Tv

Its Your Channel

ವಿವಿಧ ಶಾಲಾ ಕಾಲೇಜುಗಳಲ್ಲಿ ಮತಯಾಚನೆ ಮಾಡಿದ ಪ್ರಸನ್ನ ಎನ್.ಗೌಡ

ಕೆ.ಆರ್.ಪೇಟೆ:-ಆಮ್ ಆದ್ಮಿ ಪಕ್ಷ, ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳ ಬೆಂಬಲಿತ ದಕ್ಷಿಣ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಾಕಣದಲ್ಲಿರುವ ಪ್ರಸನ್ನ ಎನ್.ಗೌಡ ಅವರು ಇಂದು ಕೆ.ಆರ್.ಪೇಟೆ ಪಟ್ಟಣದ ವಿವಿಧ ಶಾಲಾ ಕಾಲೇಜುಗಳಲ್ಲಿ ಪ್ರಚಾರ ನಡೆಸಿ ಮತಯಾಚನೆ ಮಾಡಿದರು..

ಪಧವೀದರ ಬಂಧುಗಳ ಸ್ವಾಭಿಮಾನವನ್ನು ಎತ್ತಿಹಿಡಿಯಲು, ಸದನದಲ್ಲಿ ರೈತರು, ಶಿಕ್ಷಕರು, ತುಳಿತಕ್ಕೊಳಗಾದ ಜನರು ಹಾಗೂ ಶೋಷಿತರ ಧ್ವನಿಯಾಗಿ ಕೆಲಸ ಮಾಡಲು ತಮಗೆ ಒಂದು ಅವಕಾಶವನ್ನು ನೀಡಿ ಪದವೀಧರ ಬಂಧುಗಳು ತಮಗೆ ಪ್ರಥಮ ಪ್ರಾಶಸ್ತ್ಯ ಮತವನ್ನು ನೀಡಿ ವಿಜಯಶಾಲಿಯನ್ನಾಗಿ ಮಾಡಬೇಕು ಎಂದು ಮನವಿ ಮಾಡಿ ಪ್ರಸನ್ನ ಎನ್.ಗೌಡ ಮತಯಾಚನೆ ಮಾಡಿದರು..

ಮತಪ್ರಚಾರದಲ್ಲಿ ಮಂಡ್ಯ ಜಿಲ್ಲಾ ರೈತಸಂಘದ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್, ಕೆ.ಆರ್.ಪೇಟೆ ತಾಲ್ಲೂಕು ರೈತಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಬೂಕನಕೆರೆ ನಾಗರಾಜು, ರೈತಮುಖಂಡರಾದ ಮುದುಗೆರೆ ರಾಜೇಗೌಡ, ಮಂದಗೆರೆ ಜಯರಾಂ, ಲಕ್ಷ್ಮೀಪುರ ಜಗಧೀಶ್, ಪಿ.ಬಿ.ಮಂಚನಹಳ್ಳಿ ನಾಗಣ್ಣಗೌಡ, ಸಿಂದಘಟ್ಟ ಮುದ್ದುಕುಮಾರ್, ಕೆ.ಆರ್.ಪೇಟೆ ತಾಲ್ಲೂಕು ಆಟೋ ಚಾಲಕರ ಸಂಘದ ಅಧ್ಯಕ್ಷ ವಾಸುದೇವ ಮತ್ತಿತರರು ಉಪಸ್ಥಿತರಿದ್ದರು..

ವರದಿ..ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: