ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೀಳನಕೊಪ್ಪಲು ಗ್ರಾಮದ ಸುನಂದಮ್ಮ ಆಯ್ಕೆಯಾಗಿದ್ದಾರೆ ..
ಅಧ್ಯಕ್ಷ ಸ್ಥಾನಕ್ಕೆ ಸುನಂದಮ್ಮ ಮತ್ತು ರಾಜೇಶ್ವರಿ ನಾಮಪತ್ರ ಸಲ್ಲಿಸಿದ್ದು 19 ಸದಸ್ಯರ ಬಲದ ಬೂಕನಕೆರೆ ಗ್ರಾಮ ಪಂಚಾಯತಿಯಲ್ಲಿ ಸುನಂದಮ್ಮ ಪರವಾಗಿ 12 ಸದಸ್ಯರು ಹಾಗೂ ರಾಜೇಶ್ವರಿ ಅವರ ಪರವಾಗಿ 03 ಸದಸ್ಯರು ಮತ ಚಲಾಯಿಸಿದರು. ಚುನಾವಣಾಧಿಕಾರಿಗಳಾದ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಅತೀ ಹೆಚ್ಚು ಮತ ಪಡೆದು ಭಾರೀ ಅಂತರದಿAದ ವಿಜಯಶಾಲಿಯಾದ ಸುನಂದಮ್ಮ ಅವರಿಗೆ ಅಧಿಕಾರ ಹಸ್ತಾಂತರಿಸಿದರು..
ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು ಸಹಾಯಕ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು..
ಹೈಕಮಾಂಡ್ ತೀರ್ಮಾನದಂತೆ ಈ ಹಿಂದೆ ಬೂಕನಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿದ್ದ ಭಾಗ್ಯಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬಹುಮತ ಹೊಂದಿರುವ ಬಿಜೆಪಿ ಪಕ್ಷದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುನಂದಮ್ಮ ಆಯ್ಕೆಯಾಗಿ ಮಾಜಿ ಸಿಎಂ ಯಡಿಯೂರಪ್ಪ ತವರಿನಲ್ಲಿ ಮತ್ತೆ ಬಿಜೆಪಿ ಪಕ್ಷಕ್ಕೆ ಗೆಲುವು ತಂದುಕೊಟ್ಟರು..
ನೂತನ ಅಧ್ಯಕ್ಷೆ ಸುನಂದಮ್ಮ ಅವರನ್ನು ಸಚಿವ ಡಾ.ನಾರಾಯಣಗೌಡ ಅಭಿನಂದಿಸಿ ಸನ್ಮಾನಿಸಿ ಗೌರವಿಸಿದರು.
ಬಿಜೆಪಿ ಬೆಂಬಲಿಗರು ಹಾಗೂ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು..
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ
More Stories
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ
ದೇವಿರಮ್ಮಣ್ಣೆ ಕೆರೆ ಅಂಗಳಕ್ಕೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಬಾಂಧವರು