May 16, 2024

Bhavana Tv

Its Your Channel

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು

ಕೃಷ್ಣರಾಜಪೇಟೆ:– ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವಿದ್ಯುತ್ ಪ್ರವಹಿಸಿ ಶಾಕ್ ನಿಂದ ದೊಡ್ಡಗಾಡಿಗನಹಳ್ಳಿಯ ಯುವಕ ಮಧು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ ..

ಕೆ.ಆರ್.ಪೇಟೆ ತಾಲ್ಲೂಕು ಬೂಕನಕೆರೆ ಹೋಬಳಿಯ ಚಿಕ್ಕಗಾಡಿಗನಹಳ್ಳಿ ಗ್ರಾಮದ ಪ್ರಗತಿಪರ ರೈತರಾದ ರಾಜು ಅವರ ಪುತ್ರ ಮಧು (18) ಮೃತ ಪಟ್ಟ ದುರ್ದೈವಿಯಾಗಿದ್ದಾರೆ.

ಸಂಜೆ ಸುಮಾರು 6 ಗಂಟೆ ಸಮಯದಲ್ಲಿ ಜಮೀನಿಗೆ ನೀರು ಹಾಯಿಸಲು ಹೋಗಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ವಿದ್ಯುತ್ ಶಾಕ್ ನಿಂದ ಮಧು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಆಕಸ್ಮಿಕ ಸಾವಿನಿಂದ ಬದುಕಿ ಬಾಳಬೇಕಿದ್ದ ಚಿರ ಯೌವ್ವನದ ಯುವಕನ ಬದುಕಿನ ಪಯಣ ಅಂತ್ಯಗೊಳಿಸಿದ್ದಾನೆ. ಮೃತರ ಕುಟುಂಬದ ಸದಸ್ಯರ ನೋವಿನ ಆಕ್ರಂದನವು ಮುಗಿಲು ಮುಟ್ಟಿದೆ.
ದಲಿತ ಮುಖಂಡ ಬಸ್ತಿ ರಂಗಪ್ಪ ಮಾತನಾಡಿ ಸೆಸ್ಕ್ ಅಧಿಕಾರಿಗಳು ಪರಿಶೀಲನೆ ನಡೆಸಿ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ವರದಿ . ಡಾ.ಕೆ.ಆರ್.ನೀಲಕಂಠ . ಕೃಷ್ಣರಾಜಪೇಟೆ .

error: