ಕೃಷ್ಣರಾಜಪೇಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಹೇಮಾವತಿ ನದಿಯಲ್ಲಿ ಪ್ರವಾಹ, ನದಿಗೆ ಬಟ್ಟೆಬರೆ ತೊಳೆಯಲು, ದನಕರುಗಳನ್ನು ತೊಳೆಯಲು ಇಳಿಯಬಾರದು, ತಗ್ಗು ಪಾತ್ರಗಳ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ತಹಶೀಲ್ದಾರ್ ಎಂ.ವಿ.ರೂಪ ಮನವಿ ..
ಹಾಸನ ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯದಿಂದ ೧೮ ಸಾವಿರ ಕ್ಯೂಸೆಕ್ಸ್ ನೀರನ್ನು ಹೇಮಾವತಿ ನದಿಗೆ ಹರಿಯ ಬಿಟ್ಟಿರುವುದರಿಂದ ಹೇಮಾವತಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಹೇಮಾವತಿ ನದಿಯು ಉಕ್ಕಿ ಹರಿಯುತ್ತಿದೆ, ನದಿ ಪಾತ್ರಗಳ ಜನರು ನದಿಯ ನೀರಿಗೆ ಇಳಿಯಬಾರದು, ತಗ್ಗು ಪಾತ್ರಗಳ ಜನರು ಎಚ್ಚರಿಕೆಯಿಂದ ಇರಬೇಕು ಎಂದು ತಹಶೀಲ್ದಾರ್ ಎಂ.ವಿ.ರೂಪ ಮನವಿ ಮಾಡಿದ್ದಾರೆ…
ಕೆ.ಆರ್.ಪೇಟೆ ತಾಲ್ಲೂಕಿನ ಮಂದಗೆರೆ, ಚಿಕ್ಕಮಂದಗೆರೆ, ಗೊಂದಿಹಳ್ಳಿ, ಬಂಡಿಹೊಳೆ, ಶ್ರವಣಹಳ್ಳಿ, ಬೇವಿನಹಳ್ಳಿ, ಗದ್ದೆಹೊಸೂರು, ಬೇವಿನಹಳ್ಳಿಕೊಪ್ಪಲು, ಹೇಮಗಿರಿ, ತ್ರಿವೇಣಿ ಸಂಗಮ ಹಾಗೂ ಸೋಮನಾಥಪುರ ಗ್ರಾಮಗಳಿಗೆ ಇಂದು ಭೇಟಿ ನೀಡಿದ ತಹಶೀಲ್ದಾರ್ ಎಂ.ವಿ.ರೂಪ ನದಿ ಪಾತ್ರದ ಮನೆಗಳು ಹಾಗೂ ಜಮೀನುಗಳ ಮಾಲೀಕರಿಗೆ ಎಚ್ಚರಿಕೆ ನೀಡಿ ನದಿಯ ನೀರಿನ ಪ್ರವಾಹದ ಮಟ್ಟವು ಏರಿಕೆಯಾಗುವ ಸಾಧ್ಯತೆಗಳಿರುವುದರಿಂದ ಜನಸಾಮಾನ್ಯರು ಹಾಗೂ ರೈತಬಾಂಧವರು ನದಿಗೆ ಬಟ್ಟೆಬರೆಗಳನ್ನು ತೊಳೆಯಲು ಹಾಗೂ ಜನಜಾನುವಾರುಗಳನ್ನು ತೊಳೆಯಲು ನೀರಿಗೆ ಇಳಿಯಬಾರದು ಎಂದು ಮನವಿ ಮಾಡಿದ ರೂಪ ಅವರು ತಗ್ಗು ಪ್ರದೇಶಗಳಲ್ಲಿ ವಾಸವಾಗಿರುವ ಜನರು ಸುರಕ್ಷಿತವಾದ ಸ್ಥಳಗಳಿಗೆ ಸ್ಥಳಾಂತರವಾಗಬೇಕು ಎಂದು ಕಿವಿಮಾತು ಹೇಳಿದರು..
ಈ ಸಂದರ್ಭದಲ್ಲಿ ಅಕ್ಕಿಹೆಬ್ಬಾಳು ಹೋಬಳಿಯ ರಾಜಶ್ವನಿರೀಕ್ಷಕ ನರೇಂದ್ರ, ಗ್ರಾಮಲೆಕ್ಕಾಧಿಕಾರಿ ರಾಘವೇಂದ್ರ, ಪೂಜಾ, ಗ್ರಾಮಾಂತರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಪ್ರಮೋದ್ ಮತ್ತು ಬಂಡಿಹೊಳೆ ಗ್ರಾಮ ಪಂಚಾಯತಿ ಅಧ್ಯಕ್ಷ ಸುನಿಲ್ ಮತ್ತಿತರರು ಉಪಸ್ಥಿತರಿದ್ದರು..
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ .
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ