ಕೆ.ಆರ್.ಪೇಟೆ :-ಬೀದಿ ಬದಿಯ ವ್ಯಾಪಾರಿಗಳು ಆರ್ಥಿಕ ಸ್ವಾವಲಂಬನೆ ಸಾಧಿಸಲು ಅನುಕೂಲವಾಗಲು ಬ್ಯಾಂಕುಗಳಿAದ ಸಾಲ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಗುರುತಿನ ಚೀಟಿ ಹಾಗೂ ಅನುಮತಿ ಪತ್ರ ವಿತರಣೆ ಮಾಡಲಾಗುತ್ತಿದೆ. ಪುರಸಭೆ ಅಧ್ಯಕ್ಷೆ ಮಹಾದೇವಿನಂಜುAಡ ಘೋಷಣೆ..
ಫುಟ್ ಪಾತ್ ಹಾಗೂ ತಳ್ಳುವ ಗಾಡಿಗಳಲ್ಲಿ ವ್ಯಾಪಾರ ಮಾಡುತ್ತಿರುವ ಬಡ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಗುರುತಿನ ಚೀಟಿ ಹಾಗೂ ಅನುಮತಿ ಪತ್ರವನ್ನು ಪುರಸಭೆಯ ವತಿಯಿಂದ ನೀಡಲಾಗುತ್ತಿದೆ. ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವ ವರ್ತಕರು ಹಾಗೂ ಬಡ ವ್ಯಾಪಾರಿಗಳು ಸಾರ್ವಜನಿಕರು ಹಾಗೂ ವಾಹನಗಳ ಓಡಾಟಕ್ಕೆ ತೊಂದರೆಯಾಗದAತೆ ಎಚ್ಚರ ವಹಿಸಿ ನೆಮ್ಮದಿಯಿಂದ ವ್ಯಾಪಾರ ವಹಿವಾಟು ಮಾಡಿ ಆರ್ಥಿಕ ಸ್ವಾವಲಂಬನೆ ಸಾಧಿಸಿ ನೆಮ್ಮದಿಯ ಜೀವನ ನಡೆಸಬೇಕು ಎಂದು ಪುರಸಭೆ ಅಧ್ಯಕ್ಷೆ ಮಹಾದೇವಿನಂಜುAಡ ಮನವಿ ಮಾಡಿ, ರಸ್ತೆ ಬದಿಯ ವ್ಯಾಪಾರಿಗಳಿಗೆ ಶುಭ ಹಾರೈಸಿದರು..
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಕುಮಾರ್, ಪರಿಸರ ಎಂಜಿನಿಯರ್ ಅರ್ಚನಾಆರಾಧ್ಯ, ಮುಖಂಡರಾದ ಕೆ.ಎಸ್.ಗಿರೀಶ್ ಹಾಗೂ ರಸ್ತೆ ಬದಿಯ ವ್ಯಾಪಾರಿಗಳು ಉಪಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ .
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ