May 3, 2024

Bhavana Tv

Its Your Channel

ಕೆ.ಆರ್.ಪೇಟೆ ಪಟ್ಟಣದ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಹಾಗೂ ಅನುಮತಿ ಪತ್ರ ವಿತರಣೆ ..

ಕೆ.ಆರ್.ಪೇಟೆ :-ಬೀದಿ ಬದಿಯ ವ್ಯಾಪಾರಿಗಳು ಆರ್ಥಿಕ ಸ್ವಾವಲಂಬನೆ ಸಾಧಿಸಲು ಅನುಕೂಲವಾಗಲು ಬ್ಯಾಂಕುಗಳಿAದ ಸಾಲ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಗುರುತಿನ ಚೀಟಿ ಹಾಗೂ ಅನುಮತಿ ಪತ್ರ ವಿತರಣೆ ಮಾಡಲಾಗುತ್ತಿದೆ. ಪುರಸಭೆ ಅಧ್ಯಕ್ಷೆ ಮಹಾದೇವಿನಂಜುAಡ ಘೋಷಣೆ..

ಫುಟ್ ಪಾತ್ ಹಾಗೂ ತಳ್ಳುವ ಗಾಡಿಗಳಲ್ಲಿ ವ್ಯಾಪಾರ ಮಾಡುತ್ತಿರುವ ಬಡ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಗುರುತಿನ ಚೀಟಿ ಹಾಗೂ ಅನುಮತಿ ಪತ್ರವನ್ನು ಪುರಸಭೆಯ ವತಿಯಿಂದ ನೀಡಲಾಗುತ್ತಿದೆ. ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವ ವರ್ತಕರು ಹಾಗೂ ಬಡ ವ್ಯಾಪಾರಿಗಳು ಸಾರ್ವಜನಿಕರು ಹಾಗೂ ವಾಹನಗಳ ಓಡಾಟಕ್ಕೆ ತೊಂದರೆಯಾಗದAತೆ ಎಚ್ಚರ ವಹಿಸಿ ನೆಮ್ಮದಿಯಿಂದ ವ್ಯಾಪಾರ ವಹಿವಾಟು ಮಾಡಿ ಆರ್ಥಿಕ ಸ್ವಾವಲಂಬನೆ ಸಾಧಿಸಿ ನೆಮ್ಮದಿಯ ಜೀವನ ನಡೆಸಬೇಕು ಎಂದು ಪುರಸಭೆ ಅಧ್ಯಕ್ಷೆ ಮಹಾದೇವಿನಂಜುAಡ ಮನವಿ ಮಾಡಿ, ರಸ್ತೆ ಬದಿಯ ವ್ಯಾಪಾರಿಗಳಿಗೆ ಶುಭ ಹಾರೈಸಿದರು..

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಕುಮಾರ್, ಪರಿಸರ ಎಂಜಿನಿಯರ್ ಅರ್ಚನಾಆರಾಧ್ಯ, ಮುಖಂಡರಾದ ಕೆ.ಎಸ್.ಗಿರೀಶ್ ಹಾಗೂ ರಸ್ತೆ ಬದಿಯ ವ್ಯಾಪಾರಿಗಳು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ .

error: