ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಹೋಳಿ ಹುಣ್ಣಿಮೆಯ ಅಂಗವಾಗಿ ಇಂದು ಅಮ್ಮನವರಿಗೆ ವಿಶೇಷವಾಗಿ ಪೂಜೆ ಪುರಸ್ಕಾರಗಳು ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ಶ್ರಧ್ಧಾಭಕ್ತಿಯಿಂದ ನಡೆದವು ..
ವೇದಬ್ರಹ್ಮ ಶ್ರೀ ರವೀಂದ್ರಶರ್ಮಾ ಅವರ ನೇತೃತ್ವದಲ್ಲಿ ಪೂಜೆ ಪುರಸ್ಕಾರಗಳು ನಡೆದವು. ಸಾವಿರಾರು ಭಕ್ತಾದಿಗಳು ಹೋಳಿ ಹುಣ್ಣಿಮೆಯ ಶುಕ್ರವಾರದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಿಯ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿ ಧನ್ಯರಾದರು..
ಪೂಜಾ ಕಾರ್ಯಕ್ರಮದಲ್ಲಿ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹೆಚ್.ಎಂ.ಚAದ್ರಶೇಖರ್, ಮಾಜಿಅಧ್ಯಕ್ಷ ಕಬಾಬ್ ನಾರಾಯಣಪ್ಪ, ಉಧ್ಯಮಿ ಕೆ.ಹೆಚ್.ಆರ್ ಚಂದ್ರಶೇಖರ್, ದಾನಿಗಳಾದ ಪರಿಮಳನಾಗರಾಜಶೆಟ್ಟಿ, ಮಧುಸೂದನ್, ಮಾರಿಗುಡಿ ಚಂದ್ರಶೇಖರ್, ರವಿನಂದನ್, ಲಕ್ಷ್ಮಣ, ಪುರಸಭೆ ಮಾಜಿಅಧ್ಯಕ್ಷ ಕೆ.ಸಿ.ವಾಸು, ಮುಖಂಡರಾದ ಕೆ.ಆರ್.ಪುಟ್ಟಸ್ವಾಮಿ, ನಾಗರತ್ನಮ್ಮ ಸಿದ್ಧಪ್ಪಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು…
ವರದಿ. ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ