May 15, 2024

Bhavana Tv

Its Your Channel

ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಶಿವಶರಣ ನುಲಿಯ ಚಂದಯ್ಯ ಅವರ 915ನೇ ಜಯಂತ್ಯೋತ್ಸವ

ಕೆ.ಆರ್.ಪೇಟೆ:– ಶರಣ ಶ್ರೇಷ್ಠ, ಶಿವಶರಣ ನುಲಿಯ ಚಂದಯ್ಯ ಅವರ 915ನೇ ಜಯಂತ್ಯೋತ್ಸವ ಸಮಾರಂಭವು ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು ..

ತಹಶೀಲ್ದಾರ್ ಎಂ.ವಿ.ರೂಪ ನುಲಿಯ ಚಂದಯ್ಯ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ ಕಾಯಕಯೋಗಿ ಅಣ್ಣ ಬಸವಣ್ಣನವರ ಶಿಷ್ಯರಾಗಿ ಅನುಭವಮಂಟಪದಲ್ಲಿ ವಿಚಾರಧಾರೆಯನ್ನು ಮಂಡಿಸಿ ಸಾಮಾಜಿಕ ಕ್ರಾಂತಿ ಮಾಡಿದ ನುಲಿಯ ಚಂದಯ್ಯ ಅವರ ಸಂದೇಶಗಳು ಸಾರ್ವಕಾಲಿಕ ಸತ್ಯವಾಗಿವೆ. ಜಾತಿ, ಮತ, ಪಂಥಗಳಿAದ ಮುಕ್ತವಾದ ಆರೋಗ್ಯವಂತ ಸಮ ಸಮಾಜದ ನಿರ್ಮಾಣಕ್ಕಾಗಿ ಹೋರಾಡಿದ ಶರಣಶ್ರೇಷ್ಠ ಚಂದಯ್ಯ ಅವರ ಜೀವನದ ಆದರ್ಶಗಳನ್ನು ಯುವಜನರು ಕಡ್ಡಾಯವಾಗಿ ಪಾಲಿಸುವ ಮೂಲಕ ಬದಲಾವಣೆಯ ದಿಕ್ಕಿನಲ್ಲಿ ಸಾಗಬೇಕು ಎಂದು ಕರೆ ನೀಡಿದರು.

ತಾಲ್ಲೂಕು ಪಂಚಾಯತಿಯ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು ನುಲಿಯ ಚಂದಯ್ಯ ಅವರ ಜೀವನದ ಸಾಧನೆಗಳು ಹಾಗೂ ಸಂದೇಶ ಕುರಿತು ಮಾತನಾಡಿದರು..

ತಾಲ್ಲೂಕು ಕುಳುವ ಸಮಾಜದ ಅಧ್ಯಕ್ಷ ಕೆ.ಟಿ.ಕುಮಾರ್, ತಾಲ್ಲೂಕು ನಯನಜ ಕ್ಷತ್ರಿಯ ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ.ಶಿವಪ್ಪ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಮಹೇಶ್, ಬಿಸಿಎಂ ಅಧಿಕಾರಿ ವೆಂಕಟೇಶ್, ಬಿಇಓ ಸೀತಾರಾಮ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಶರಣ ಶ್ರೇಷ್ಠ ನುಲಿಯ ಚಂದಯ್ಯ ಅವರಿಗೆ ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸಿದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ .

error: