ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತಿಷ್ಠಾಪಿಸಿದ್ದ ಆರೋಗ್ಯ ಗಣಪತಿ ಮೂರ್ತಿಯ ಅದ್ದೂರಿ ಮೆರವಣಿಗೆ..ದೇವೀರಮ್ಮಣ್ಣಿ ಕೆರೆಯಲ್ಲಿ ವಿಸರ್ಜನೆ..ಮುಗಿಲು ಮುಟ್ಟಿದ ಸಂಭ್ರಮ ..
ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿದ್ದ ಪರಿಸರ ಸ್ನೇಹಿ ಆರೋಗ್ಯ ಗಣಪನನ್ನು ಐದು ದಿನಗಳ ಕಾಲ ವಿಶೇಷವಾಗಿ ಪೂಜಿಸಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಿವಕುಮಾರ್ ಅವರ ನೇತೃತ್ವದಲ್ಲಿ ತೆರೆದ ವಾಹನದಲ್ಲಿ ಅಲಂಕರಿಸಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಇತಿಹಾಸ ಪ್ರಸಿದ್ಧ ದೇವೀರಮ್ಮಣ್ಣಿ ಕೆರೆಯಲ್ಲಿ ವಿಸರ್ಜಿಸಲಾಯಿತು…
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಸರಳವಾಗಿ ಆಚರಿಸಿದ್ದ ಗಣೇಶೋತ್ಸವವನ್ನು ಈ ಭಾರಿ ವಿಜೃಂಭಣೆಯಿAದ ಅದ್ದೂರಿಯಾಗಿ ಆಚರಿಸಿ ಐದು ದಿನಗಳ ಕಾಲ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂಧಿಗಳು ವಿಶೇಷವಾಗಿ ಪೂಜಿಸಿ ಇಂದು ಮೆರವಣಿಗೆ ನಡೆಸಿ ಕೆ.ಆರ್.ಪೇಟೆ ಪಟ್ಟಣದ ಪುರಾಣ ಪ್ರಸಿದ್ಧವಾದ ದೇವೀರಮ್ಮಣ್ಣಿ ಕೆರೆಯಲ್ಲಿ ವಿಸರ್ಜಿಸುತ್ತಿದ್ದೇವೆ ಎಂದು ತಿಳಿಸಿದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಿವಕುಮಾರ್ ವಿಘ್ನನಿವಾರಕನಾದ ಗಣಪತಿಯು ಈ ಬಾರಿ ಸುಖ, ಸಂತೋಷ, ಸಮೃದ್ಧಿ ಹಾಗೂ ಆರೋಗ್ಯವನ್ನು ಕರುಣಿಸಲಿ ಆರೋಗ್ಯವಂತ ಸಮಾಜದ ನಿರ್ಮಾಣವಾಗಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು….
ಆಸ್ಪತ್ರೆಯ ಸಿಬ್ಬಂಧಿಗಳು, ಶುಷ್ರೂಷಕಿಯರು, ವೈದ್ಯರು, ಮಹಿಳೆಯರು ಹಾಗೂ ಮಕ್ಕಳು ಗಣೇಶೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ್ದರು…
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ