April 29, 2024

Bhavana Tv

Its Your Channel

ಮಹಾಕುಂಭಮೇಳ ಅಂಗವಾಗಿ ಅಕ್ಟೋಬರ್ 13 ರಂದು ಕೆ.ಆರ್.ಪೇಟೆ ಪಟ್ಟಣದಲ್ಲಿ ಮಹದೇಶ್ವರ ಜ್ಯೋತಿ ರಥಯಾತ್ರೆ

ಕೃಷ್ಣರಾಜಪೇಟೆ:- ಮಹಾಕುಂಭಮೇಳ ಅಂಗವಾಗಿ ಅಕ್ಟೋಬರ್ 13 ರಂದು ಕೆ.ಆರ್.ಪೇಟೆ ಪಟ್ಟಣದಲ್ಲಿ ಮಹದೇಶ್ವರ ಜ್ಯೋತಿ ರಥಯಾತ್ರೆ.. ಮಂಡ್ಯ ಜಿಲ್ಲಾ ಜನಪದ ಉತ್ಸವ..ಮೂಡಬಿದ್ರೆಯ ಆಳ್ವಾಸ್ ನುಡಿಸಿರಿ ಖ್ಯಾತಿಯ 3 ಸಾವಿರಕ್ಕೂ ಹೆಚ್ಚು ಕಲಾವಿದರು ಉತ್ಸವದಲ್ಲಿ ಭಾಗಿ. ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ಪ್ರಕಟಣೆ ..

ಕೃಷ್ಣರಾಜಪೇಟೆ ತಾಲ್ಲೂಕಿನ ಪವಿತ್ರ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳವು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನ ಜನರಲ್ಲಿ ಜಾಗೃತಿ ಮೂಡಿಸಲು ಅಕ್ಟೋಬರ್ 13ರ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ನುಡಿಸಿರಿ ಖ್ಯಾತಿಯ ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲಾ ಜಾನಪದ ಉತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಲಿದ್ದು 3 ಸಾವಿರ ಕಲಾವಿದರು ಹಾಗೂ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಗೃತಿ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ ಎಂದು ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ತಿಳಿಸಿದರು…

ಅವರು ಇಂದು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಳ್ವಾಸ್ ನುಡಿಸಿರಿ ವ್ಯವಸ್ಥಾಪಕ ಸಿಬ್ಬಂಧಿಗಳು, ಪಟ್ಟಣದ ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಸಿ ಮಾತನಾಡಿದರು…

ಅಕ್ಟೋಬರ್13ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಮಿನಿವಿಧಾನಸೌಧದ ಆವರಣದಿಂದ ಆರಂಭವಾಗುವ ಮಹದೇಶ್ವರರ ಜ್ಯೋತಿ ರಥ ಯಾತ್ರೆಯಲ್ಲಿ 100 ಜಾನಪದ ಕಲಾತಂಡಗಳ 3 ಸಾವಿರ ಕಲಾವಿದರು, 5ಸಾವಿರ ಕಾಲೇಜು ವಿದ್ಯಾರ್ಥಿಗಳು ವೇಷಭೂಷಣಗಳನ್ನು ತೊಟ್ಟು ಕೆ.ಆರ್.ಪೇಟೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವೈವಿಧ್ಯಮಯವಾದ ಮೆರವಣಿಗೆ ನಡೆಸಿ ಪುರಸಭಾ ಕಾರ್ಯಾಕಯದ ಪಕ್ಕದಲ್ಲಿರುವ ಬೃಹತ್ ಮೈದಾನವನ್ನು ತಲುಪಲಿದ್ದಾರೆ. ಸಂಜೆ 6ಗಂಟೆಯಿAದ ರಾತ್ರಿ 9ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಯಕ್ಷಗಾನ ಪ್ರಸಂಗಗಳ ಪ್ರದರ್ಶನವು ನಡೆಯಲಿದ್ದು ಕೆ.ಆರ್.ಪೇಟೆ ಪಟ್ಟಣದಲ್ಲಿ ಹಬ್ಬದ ವಾತಾವರಣವು ನಿರ್ಮಾಣವಾಗಲಿದೆ. ಮಹದೇಶ್ವರ ಜ್ಯೋತಿ ರಥಯಾತ್ರೆಯು ಹಾದು ಹೋಗುವ ಮಾರ್ಗದುದ್ದಕ್ಕೂ ರಂಗೋಲಿಗಳನ್ನು ಹಾಕಿಸಿ ತಳಿರು ತೋರಣಗಳಿಂದ ಸಿಂಗರಿಸಲಾಗುವುದು. ಕೆ.ಆರ್.ಪೇಟೆ ಪಟ್ಟಣದ ಜನತೆ ಜಿಲ್ಲಾ ಮಟ್ಟದ ಜನಪದ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾಕುಂಭಮೇಳದ ಯಶಸ್ಸಿಗೆ ಕೈಜೋಡಿಸಬೇಕು. ಮಹಾಕುಂಭಮೇಳ ಕಾರ್ಯಕ್ರಮದಲ್ಲಿ ಕನಿಷ್ಠ 6 ಲಕ್ಷಕ್ಕೂ ಹೆಚ್ಚಿನ ಭಕ್ತಾದಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದ್ದು ಭಕ್ತಾದಿಗಳ 4 ದಿನಗಳ ಕಾಲ ನಡೆಯಲಿರುವ ಮಹಾದಾಸೋಹಕ್ಕೆ ಅಕ್ಕಿ, ಬೇಳೆ, ಬೆಲ್ಲ, ತೆಂಗಿನಕಾಯಿ, ರೀಫೈಂಡ್ ಆಯಲ್, ನಂದಿನಿ ತುಪ್ಪ ಸೇರಿದಂತೆ ಅವಶ್ಯಕ ವಸ್ತುಗಳನ್ನು ಉದಾರವಾಗಿ ದಾನ ಮಾಡಬೇಕು ಎಂದು ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ಮನವಿ ಮಾಡಿದರು..

ಸಮಾಲೋಚನಾ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ನಾಗರಾಜು, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಟಿ.ಜವರೇಗೌಡ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ತಹಶೀಲ್ದಾರ್ ಎಂ.ವಿ.ರೂಪ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ಪುರಸಭೆ ಮುಖ್ಯಾಧಿಕಾರಿ ಕುಮಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ಕಲಾತಂಡಗಳ ವ್ಯವಸ್ಥಾಪಕರು ಉಪಸ್ಥಿತರಿದ್ದರು…

ವರದಿ:. ಡಾ.ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ. ಮಂಡ್ಯ

error: