ವೈಕುಂಠ ಏಕಾದಶಿಯ ಅಂಗವಾಗಿ ಸಚಿವ ಡಾ.ನಾರಾಯಣಗೌಡ ದಂಪತಿಗಳಿoದ ವಿಶೇಷ ಪೂಜೆ, ಹರಿನಾಮ ಸ್ಮರಣೆ..ಅಗ್ರಹಾರಬಾಚಹಳ್ಳಿ ಮತ್ತು ಹೊಸಹೊಳಲು ಗ್ರಾಮದಲ್ಲಿ ಮುಗಿಲು ಮುಟ್ಟಿದ ಸಡಗರ ಸಂಭ್ರಮ …
ಕೆ.ಆರ್.ಪೇಟೆ :- ವೈಕುಂಠ ಏಕಾದಶಿಯ ಅಂಗವಾಗಿ ಕೆ.ಆರ್.ಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧವಾದ ಹೊಸಹೊಳಲು ಶ್ರೀಲಕ್ಷ್ಮೀನಾರಾಯಣಸ್ವಾಮಿ ದೇವಾಲಯ ಹಾಗೂ ಅಗ್ರಹಾರಬಾಚಹಳ್ಳಿಯ ಶ್ರೀ ಚನ್ನಕೇಶವಸ್ವಾಮಿ ದೇವಾಲಯಕ್ಕೆ ರಾಜ್ಯದ ಯುವಸಬಲೀಕರಣ, ಕ್ರೀಡೆ ಹಾಗೂ ರೇಷ್ಮೆ ಸಚಿವರಾದ ಡಾ.ನಾರಾಯಣಗೌಡ ಅವರು ತಮ್ಮ ಧರ್ಮಪತ್ನಿ ದೇವಕಿ ಅವರ ಸಮೇತ ಭೇಟಿ ನೀಡಿ ಭಗವಂತನ ದರ್ಶನ ಪಡೆದರು..
ಸರತಿಯ ಸಾಲಿನಲ್ಲಿ ಆಗಮಿಸಿದ ಸಚಿವ ನಾರಾಯಣಗೌಡ ದಂಪತಿಗಳು ವೈಕುಂಠ ಧ್ವಾರದ ಮೂಲಕ ಆಗಮಿಸಿ ಶ್ರೀ ಚನ್ನಕೇಶವಸ್ವಾಮಿ ಹಾಗೂ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿಯ ದರ್ಶನ ಪಡೆದು ಲೋಕಕಲ್ಯಾಣಾರ್ಥವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು..
ಹೊಸಹೊಳಲು ಹೊಯ್ಸಳ ಶಿಲ್ಪಕಲೆಯ ವಾಸ್ತುವೈಭವದ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ ದೇವಾಲಯಕ್ಕೆ ಆಗಮಿಸಿದ ಸಚಿವ ನಾರಾಯಣಗೌಡ ದಂಪತಿಗಳನ್ನು ತಹಶೀಲ್ದಾರ್ ಎಂ.ವಿ.ರೂಪ, ಪುರಸಭಾ ಸದಸ್ಯ ಹೆಚ್.ಆರ್.ಲೋಕೇಶ್, ಶ್ರೀಮತಿ ತಾರಾ ಲೋಕೇಶ್, ಜಯಮ್ಮ, ರವಿಶೆಟ್ಟಿ, ಸುಕನ್ಯಾರಂಗನಾಥ್ ಹಾಗೂ ಗ್ರಾಮಸ್ಥರು ಹೃದಯಸ್ಪರ್ಶಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು..
ಪೋಲಿಸ್ ಇನ್ಸ್ ಪೆಕ್ಟರ್ ಎಂ.ಕೆ.ದೀಪಕ್, ಸಬ್ ಇನ್ಸ್ ಪೆಕ್ಟರ್ ಸುನಿಲ್, ರಾಜಶ್ವನಿರೀಕ್ಷಕಿ ಚಂದ್ರಕಲಾ, ಗ್ರಾಮಲೆಕ್ಕಾಧಿಕಾರಿ ಹರೀಶ್, ಪುರಸಭಾ ಮುಖ್ಯಾಧಿಕಾರಿ ಬಸವರಾಜು, ಸದಸ್ಯೆ ಕಲ್ಪನಾ ದೇವರಾಜು, ಸಚಿವ ನಾರಾಯಣಗೌಡರ ಆಪ್ತಸಹಾಯಕ ದಯಾನಂದ, ಮಾಧ್ಯಮ ಸಂಯೋಜಕ ಪ್ರದೀಪ್ ಕುಮಾರ್, ಅಂಗರಕ್ಷಕರಾದ ಕುಕ್ಕೆ ಭುವನೇಶ್ ಮತ್ತಿತರರು ಉಪಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ