April 26, 2024

Bhavana Tv

Its Your Channel

ಕೊರಟಿಕೆರೆ ಗ್ರಾಮದ ವಿದ್ಯುತ್ ಮಗ್ಗ ನೇಕಾರರ ಉತ್ಪಾದನಾ ಮತ್ತು ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿಶ್ವನಾಥ ಅವಿರೋಧವಾಗಿ ಆಯ್ಕೆ

ಕೃಷ್ಣರಾಜಪೇಟೆ :-ಕೊರಟಿಕೆರೆ ಗ್ರಾಮದ ವಿದ್ಯುತ್ ಮಗ್ಗ ನೇಕಾರರ ಉತ್ಪಾದನಾ ಮತ್ತು ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮುಖಂಡರಾದ ವಿಶ್ವನಾಥ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಚಿವ ಡಾ.ನಾರಾಯಣಗೌಡ ನೂತನ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳನ್ನು ಅಭಿನಂದಿಸಿ ಸನ್ಮಾನಿಸಿ ಗೌರವಿಸಿದರು ..

ಕೆ.ಆರ್.ಪೇಟೆ ಪಟ್ಟಣದ ಸಚಿವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೊರಟಿಕೆರೆ ಗ್ರಾಮದ ವಿದ್ಯುತ್ ಮಗ್ಗ ನೇಕಾರರ ಉತ್ಪಾದನಾ ಮತ್ತು ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷ ವಿಶ್ವನಾಥ, ಉಪಾಧ್ಯಕ್ಷ ವೀರಭದ್ರಶೆಟ್ಟಿ, ಕಾರ್ಯದರ್ಶಿ ಆರ್.ಮಹೇಶ್ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರಾದ ಈಶ್ವರ, ಚಂದ್ರ, ಕೆ.ಯೋಗೇಶ, ಚಂದ್ರಕಲಾ ರಮೇಶ್, ರೇಣುಕಾಸಂಜಯ್ ಕುಮಾರ್, ಮೋಹನಕುಮಾರ, ಗ್ರಾಮದ ಹಾಲಿನ ಡೈರಿಯ ಕಾರ್ಯದರ್ಶಿ ರಂಗಸ್ವಾಮಿ ಅವರನ್ನು ಸಚಿವ ಡಾ.ನಾರಾಯಣಗೌಡ ಸನ್ಮಾನಿಸಿ ಗೌರವಿಸಿದರು…

ಚುನಾವಣಾಧಿಕಾರಿಗಳಾದ ಸಹಕಾರ ಅಭಿವೃದ್ಧಿ ಅಧಿಕಾರಿ ಕೆ.ಎಂ.ಆನAದನಾಯಕ ಅವರು ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಯನ್ನು ಪ್ರಕಟಿಸಿ, ಆಡಳಿತ ಮಂಡಳಿಯ ನಿರ್ದೇಶಕರು ಸರ್ವಾನುಮತದ ನಿರ್ಧಾರ ಕೈಗೊಂಡು ನೂತನ ಅಧ್ಯಕ್ಷರನ್ನಾಗಿ ವಿಶ್ವನಾಥ ಹಾಗೂ ಉಪಾಧ್ಯಕ್ಷರಾಗಿ ವೀರಭದ್ರಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

error: