ಕೆಆರ್ಪೇಟೆ:- ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮದ್ ನಲಪಾಡ್ ಅವರ ಹುಟ್ಟು ಹಬ್ಬದ ಅಂಗವಾಗಿ ಕೆ ಆರ್ ಪೇಟೆ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹೇಂದ್ರ.ಡಿ.ಎA. ರವರು ನಲಪಾಡ್ ನಿವಾಸಕ್ಕೆ ಭೇಟಿ ನೀಡಿ ಕೇಕ್ ಕತ್ತರಿಸಿ ಸನ್ಮಾಸಿ ಹುಟ್ಟು ಹಬ್ಬಕ್ಕೆ ಶುಭ ಕೋರಿದರು
ಅಲ್ಲದೆ ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಎಲ್ಲಾ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಕ್ ಗೌಡ, ಯುವ ಕಾಂಗ್ರೆಸ್ ಮುಖಂಡರಾದ ಕೊಮ್ಮೇನಹಳ್ಳಿ ಅನಿಲ್, ವರುಣ್ ಗೌಡ, ಸೈಫ್, ಶ್ರೀಕಾಂತ್, ರಕ್ಷಿತ್, ಕೇಶವ್, ನಿತಿನ್ ಮತ್ತಿತರರು ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸರ್ಕಾರಿ ಆಸ್ಪತ್ರೆಯಲ್ಲಿನ ಎಲ್ಲಾ ರೋಗಿಗಳಿಗೂ ಹಣ್ಣು ಹಂಪಲು ವಿತರಣೆ ಮಾಡಿ ಬೇಗ ಗುಣ ಮುಖರಾಗುವಂತೆ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಕ್ ಗೌಡ ಮಾತನಾಡಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮದ್ ನಲಪಾಡ್ ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ ಯುವಕರನ್ನು ಸಂಘಟಿಸಿ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಮೊಹಮದ್ ನಳಪಾಡ್ ಅವರಿಗೆ ದೇವರು ಆಯಸ್ಸು, ಆರೋಗ್ಯ ಹಾಗೂ ಅಧಿಕಾರ ನೀಡಲಿ ಎಂದು ಶುಭ ಹಾರೈಸಿದರು.
ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ
More Stories
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ
ದೇವಿರಮ್ಮಣ್ಣೆ ಕೆರೆ ಅಂಗಳಕ್ಕೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಬಾಂಧವರು