; ತಾಲೂಕು ಅಕ್ಕಿಹೆಬ್ಬಾಳು ಹೋಬಳಿಯ ಜೈನ್ನಹಳ್ಳಿ ಬಳಿ ಇರುವ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ ಶಾಸಕ ಹೆಚ್.ಟಿ.ಮಂಜು ಅವರು ದಿಢೀರ್ ಭೇಟಿ ಶಾಲೆಯ ಅವ್ಯವಸ್ಥೆಗಳ ಅವಲೋಕನ… ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ನಿಲಯ ಪಾಲಕರನ್ನು ತರಾಟೆಗೆ ತೆಗೆದುಕೊಂಡ ಶಾಸಕ ಹೆಚ್.ಟಿ. ಮಂಜು …
ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ನಿಲಯಪಾಲಕರ ವಿರುದ್ಧ ನೂರಾರು ಸಾಲು ಸಾಲು ದೂರುಗಳ ಸುರಿ ಮಳೆಯನ್ನು ಸುರಿಸಿದ ಶಾಲೆಯ ಮಕ್ಕಳು..
ಹುಳು ಬಿದ್ದಿರುವ ಅನ್ನ ಕಳಪೆ ಗುಣಮಟ್ಟದ ಸಾಂಬಾರಿನ ರುಚಿ ನೋಡಿ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡ ಶಾಸಕರು …
ಕೃಷ್ಣರಾಜಪೇಟೆ ; ದಿಢೀರ್ ಭೇಟಿ ನೀಡಿ ವಸತಿ ಶಾಲೆಯ ಅವ್ಯವಸ್ಥೆಯನ್ನು ವೀಕ್ಷಣೆ ಮಾಡಿ, ಹುಳು ಮಿಶ್ರಿತ ಆಹಾರ ಪದಾರ್ಥಗಳನ್ನು ಕಂಡು ಮಕ್ಕಳಿಗೆ ನೀಡುವ ದಿನನಿತ್ಯ ಹಾಗೂ ಮಾಸಿಕವಾಗಿ ಹಿಂಸೆ ನೀಡುತ್ತಿರುವ ಶಿಕ್ಷಕರು ವಿದ್ಯಾರ್ಥಿಗಳಿಗೆ ಅಗತ್ಯವಾದ ಸಾಮಗ್ರಿಗಳನ್ನು ಕೂಡ ನೀಡಿರುವುದಿಲ್ಲ ಎಂಬುದನ್ನು ತಿಳಿದು ಪ್ರಾಂಶುಪಾಲರು ಹಾಗೂ ವಾರ್ಡನ್ ಅವರನ್ನು ತರಾಟೆಗೆ ತೆಗೆದುಕೊಂಡರು.
ವಸತಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ದೇವರಿದ್ದಂತೆ, ಮಕ್ಕಳಿಗೆ ಮೋಸ ಮಾಡಿದರೆ ದೇವರು ನಿಮಗೆ ಎಂದಿಗೂ ಕ್ಷಮಿಸುವುದಿಲ್ಲ. ಇಲ್ಲಿ ಕಲಿಯಲು ಬಂದಿರುವ ಮಕ್ಕಳಿಗೆ ತಮ್ಮ ಮಕ್ಕಳಂತೆ ಆರೈಕೆ ಮಾಡಬೇಕು. ಗುಣಮಟ್ಟದ ಆಹಾರ ಪದಾರ್ಥಗಳನ್ನು ನೀಡಬೇಕು. ಯಾವುದೇ ಕಾರಣಕ್ಕೂ ಕಳಫೆ ಗುಣಮಟ್ಟದ ಆಹಾರ ನೀಡುವುದನ್ನು ಸಹಿಸುವುದಿಲ್ಲ ಎಂದು ವಸತಿ ಶಾಲೆಯ ಪ್ರಾಂಶುಪಾಲರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಮಕ್ಕಳ ಕುಂದು ಕೊರತೆಗಳನ್ನು ಶಾಸಕರು ಆಲಿಸಿದರು. ಈ ವೇಳೆ ವಿದ್ಯಾರ್ಥಿಗಳು ಕನ್ನಡ ಶಿಕ್ಷಕರಾದ ರೋಹಿತ್ ಅವರನ್ನು ವರ್ಗಾವಣೆ ಮಾಡಬಾರದು ಇದೇ ಶಾಲೆಯಲ್ಲಿ ಉಳಿಸಬೇಕೆಂದು ವಸತಿ ಶಾಲೆಯ ಮಕ್ಕಳು ಕಣ್ಣೀರು ಹಾಕಿ ಶಾಸಕರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್, ಸಿಂದಘಟ್ಟ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಿದಂಬರ್, ಶಾಸಕರ ಆಪ್ತಸಹಾಯಕ ಅರಳಕುಪ್ಪೆ ಪ್ರತಾಪ್ ಗೌಡ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವರದಿ ಡಾ.ಕೆ.ಆರ್.ನೀಲಕಂಠ ಕೃಷ್ಣರಾಜಪೇಟೆ …
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ