April 19, 2024

Bhavana Tv

Its Your Channel

ನಾಳೆ ನಡೆಯಬೇಕಿದ್ದ ಜನಸ್ಪಂದನಾ ಸಭೆ ಅನಿರ್ಧಿಷ್ಠಾವಧಿ ಮುಂದೂಡಿಕೆ

ಮOಡ್ಯ: ಕಿಕ್ಕೇರಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಜಿಲ್ಲಾಡಳಿತವು ಅಕ್ಟೋಬರ್ ೩೦ರ ಶನಿವಾರ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡರ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಆಯೋಜಿಸಿದ್ದ ಜನಸ್ಪಂದನಾ ಸಭೆಯನ್ನು ಅನಿರ್ಧಿಷ್ಠಾವಧಿ ಮುಂದೂಡಲಾಗಿದೆ …

ಸ್ಯಾಂಡಲ್ ವುಡ್ ಪವರ್ ಸ್ಟಾರ್, ಯುವರತ್ನ, ರಾಜಕುಮಾರ, ನಮ್ಮೆಲ್ಲರ ಪ್ರೀತಿಯ ಅಪ್ಪು ಪುನೀತ್ ರಾಜಕುಮಾರ್ ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾದ ಹಿನ್ನೆಲೆಯಲ್ಲಿ ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿ ಕೇಂದ್ರದಲ್ಲಿ ಜಿಲ್ಲಾಡಳಿತವು ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡರ ಆಪ್ತಕಾರ್ಯದರ್ಶಿಗಳಾದ ಪ್ರಭಾಕರ್ ತಿಳಿಸಿದ್ದಾರೆ…

ಕಿಕ್ಕೇರಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಆಯೋಜಿಸಿದ್ದ ಜನಸ್ಪಂದನಾ ಸಭೆಯನ್ನು ಕನ್ನಡ ಚಲನಚಿತ್ರರಂಗದ ಯುವರತ್ನ, ರಾಜಕುಮಾರ ಪುನೀತ್ ರಾಜ್‌ಕುಮಾರ್ ನಿಧನದ ಹಿನ್ನೆಲೆಯಲ್ಲಿ ಅನಿರ್ಧಿಷ್ಠಾವಧಿ ಮುಂದೂಡಲಾಗಿದೆ ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ….

ಮಾಹಿತಿಗಾಗಿ. ಡಾ.ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ.

error: