ಮಳವಳ್ಳಿ : ಒಂದು ವಾರದ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ವಿವಾಹಿತ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದು ಈಕೆಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪೋಲಿಸರು ಆಕೆಯ ಪತಿಯನ್ನು ಬಂಧಿಸಿದ್ದಾರೆ.
ಮಳವಳ್ಳಿತಾಲ್ಲೂಕಿನ ದ್ಯಾವಪಟ್ಟಣ ಗ್ರಾಮದ ಶ್ರೀಕಂಠಸ್ವಾಮಿ ಪುತ್ರಿ ೨೨ ವರ್ಷ ವಯಸ್ಸಿನ ಸಂದ್ಯಾ ಕೊಲೆಯಾದ ಗೃಹಿಣಿಯಾಗಿದ್ದು ಈಕೆಯನ್ನು ಕೊಲೆ ಮಾಡಿದ ಆರೋಪದ ಮೇಲೆ ಈಕೆಯ ಪತಿ ಮದ್ದೂರು ತಾಲ್ಲೂಕಿನ ಎಸ್ ಐ ಹಾಗಲಹಳ್ಳಿ ಗ್ರಾಮದ ಷಡಕ್ಷರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಸAದ್ಯಾಳನ್ನು ಷಡಕ್ಷರಿಗೆ ಕೊಟ್ಟು ವಿವಾಹ ಮಾಡಿಕೊಡಲಾಗಿತ್ತಾದರೂ ದಂಪತಿಗಳ ನಡುವಿನ ಹೊಂದಾಣಿಕೆ ಕೊರತೆಯಿಂದ ಒಡಕು ಉಂಟಾಗಿ ಪತಿಯನ್ನು ತೊರೆದ ಸಂದ್ಯಾ ತನ್ನ ತವರು ಮನೆ ಸೇರಿಕೊಂಡಿದ್ದಳು ಎಂದು ಗೊತ್ತಾಗಿದೆ.
ಕಳೆದ ೧೬ ರಂದು ಕೆ ಎಂ ದೊಡ್ಡಿಯಲ್ಲಿನ ಕಂಪ್ಯೂಟರ್ ಕ್ಲಾಸ್ಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಹೋದ ಈಕೆ ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿದ್ದ ಕಾರಣ ಗಾಬರಿಯಾದ ಮನೆಯವರು ಬೆಳಕವಾಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ಈ ನಡುವೆ ಭಾನುವಾರ ಈಕೆಯ ಶವ ಕುಂದೂರು ಬಾಚನಹಳ್ಳಿ ರಸ್ತೆಯ ನಾಲೆಯಲ್ಲಿ ಪತ್ತೆಯಾಗಿದ್ದು ಈ ಕುರಿತು ಪತಿ ಷಡಕ್ಷರಿಯನ್ನು ವಶಕ್ಕೆ ಪಡೆದ ಬೆಳಕವಾಡಿ ಪೊಲೀಸರು ವಿಚಾರಣೆ ನಡೆಸಿದ ವೇಳೆ ಆಕೆಯ ಜೊತೆ ಮಾತನಾಡುವ ನೆಪದಲ್ಲಿ ಕುಂದೂರು ಬಳಿ ಕರೆತಂದು ನಿರ್ಜನ ಪ್ರದೇಶದಲ್ಲಿ ಆಕೆಯ ಕುತ್ತಿಗೆ ಇಸುಕಿ ಕೊಲೆ ಮಾಡಿ ಶವವನ್ನ ನಾಲೆಯಲ್ಲಿ ಎಸೆದಿದ್ದಾಗಿ ಒಪ್ಪಿಕೊಂಡನೆAದು ಪೊಲೀಸ್ ಮೂಲ ಗಳು ತಿಳಿಸಿವೆ.
ನಂತರದಲ್ಲಿ ತಾನು ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಅಂಶವನ್ನು ಆರೋಪಿ ಬಾಯ್ಬಿಟ್ಟಿದ್ದಾನೆ.
ಆರೋಪಿಯನ್ನು ಬಂಧಿಸಿರುವ ಬೆಳಕವಾಡಿ ಪೊಲೀಸರು ಪ್ರಕರಣ ತನಿಖೆ ಕೈಗೊಂಡಿದ್ದಾರೆ
ಘಟನಾ ಸ್ಥಳಕ್ಕೆ ಅಡಿಸನಲ್ ಎಸ್ ಪಿ ಧನಂಜಯ, ಡಿ.ವೈಎಸ್ ಪಿ ಲಕ್ಷ್ಮೀನಾರಾಯಣ ಪ್ರಸಾದ್, ಹಲಗೂರು ಸರ್ಕಲ್ ಇನ್ಸ್ ಪೆಕ್ಟರ್ ಧನರಾಜ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ