April 24, 2024

Bhavana Tv

Its Your Channel

ಆರೋಗ್ಯದಿಂದ ಎಲ್ಲರೂ ಎಚ್ಚರದಿಂದ ಇರಿ- ಶಾಸಕ ಸುರೇಶಗೌಡ .

ನಾಗಮಂಗಲ. ಪ್ರತಿಯೊಬ್ಬರು ಸಮಾಜದಲ್ಲಿ ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಎಲ್ಲರೂ ಆರೋಗ್ಯದಿಂದ ಎಚ್ಚರಿಕೆಯಿಂದ ಇರುವಂತೆ ಶಾಸಕ ಸುರೇಶಗೌಡ ಕರೆನೀಡಿದರು.

ಅವರಿಂದು ನಾಗಮಂಗಲ ಕಾಲೇಜು ಕ್ರೀಡಾಂಗಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಕೂಲಿ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸುತ್ತ ಕರೋನಾ ಮಹಾಮಾರಿಯ ಕಡಿಮೆ ಯಾಗಿದೆ ಎಂದು ಎಚ್ಚರ ತಪ್ಪಿದರೆ ಅಪಾಯ ಆದ್ದರಿಂದ ಸಾಮಾಜಿಕ ಅಂತರದೊAದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು

. ಸರ್ಕಾರದ ಯೋಜನೆಯ ಪ್ರತಿಯೊಬ್ಬ ಕೂಲಿ ಕಾರ್ಮಿಕರಿಗೂ ಇಲಾಖೆ ವತಿಯಿಂದ ನೀಡುತ್ತಿದ್ದು ಇದರ ಸದುಪಯೋಗ ಪಡಿಸಿಕೊಳ್ಳುವ ಮುಖಾಂತರ ಆರೋಗ್ಯದ ಅಂತರವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು.

ಸರ್ಕಾರದ ಇಲಾಖಾ ವತಿಯಿಂದ ದೊರೆಯುವ ಸೌಲಭ್ಯಗಳು ತಮಗೆ ಹಾಗೂ ತಮ್ಮ ಕುಟುಂಬ ವರ್ಗದವರಿಗೂ ಸಿಗುವ ಸೌವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿಧಾನಪರಿಷತ್ ಸದಸ್ಯರಾದ ಅಪ್ಪಾಜಿಗೌಡ ರವರು ತಿಳಿಸಿದರು .

ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ನಿರೀಕ್ಷಕರಾದ ಮಹೇಶ್ ಪುರಸಭಾ ಅಧ್ಯಕ್ಷರಾದ ಆಶಾ ರವರು ಹಾಗೂ ಅನೇಕ ಸಂಘಟನೆಗಳು ಅನೇಕ ಸಂಘಟನೆಯ ಮುಖಂಡರುಗಳು ಹಾಜರಿದ್ದರು.

ವರದಿ: ದೇವಲಾಪುರ ಜಗದೀಶ್ ನಾಗಮಂಗಲ

error: