ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ಚೀಚನಹಳ್ಳಿ, ಚಟ್ಟೇನಹಳ್ಳಿ, ದಾಸರಹಳ್ಳಿ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಶಾಸಕ ಸುರೇಶ್ ಗೌಡ ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡದೆ ಜೆಡಿಎಸ್ ಸಂಘಟನೆಗೆ ಕೈಜೋಡಿಸಿ ಎಂದು ಚುನಾವಣಾ ಭಾಷಣ ಆರಂಭಿಸಿದರು.
ತಾಲ್ಲೂಕಿನ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸ್ಥಳ ಎಂದೇ ಗುರುತಾಗಿದ್ದ ಕದಬಹಳ್ಳಿ ವೃತ್ತದಲ್ಲಿ ೪೬ ಕೋಟಿ ವೆಚ್ಚದ ಅಂಡರ್ ಪಾಸ್ ಮತ್ತು ಸರ್ವಿಸ್ ರಸ್ತೆ ಕಾಮಗಾರಿ ಚಾಲನೆ ನೀಡಿ ಅವರು ಮಾತನಾಡಿದರು.
ನಾಗಮಂಗಲದಲ್ಲಿ ಕೆರೆಕಟ್ಟೆ ಗಳಿಗೆ ನೀರು ತುಂಬಿಸುವ ಮತ್ತು ಶುದ್ದ ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದರೂ ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ ಎಂದು
ಅಪಾದಿಸಿದರು.
ಮಾಜಿ ಸಂಸದ ಶಿವರಾಮೇಗೌಡ, ಎಂಎಲ್ಸಿ ಅಪ್ಪಾಜಿ ಗೌಡ ಶ್ರೀಕಂಠೇಗೌಡ ನಾವೆಲ್ಲಾ ಒಟ್ಟಾಗಿದ್ದು, ಮುಂದಿನ ೨೦೨೩ಕ್ಕೆ ಮತ್ತೆ ಕುಮಾರಸ್ವಾಮಿಯನ್ನ ಸಿಎಂ ಮಾಡುವುದು ನಮ್ಮೆಲ್ಲರ ಗುರಿಯಾಗಿದೆ
ಆದರೆ ಕಾಂಗ್ರೆಸ್ ನವರಿಗೆ ಜೆಡಿಎಸ್ ಟೀಕಿಸುವುದು ಒಂದು ಚಾಳಿಯಾಗಿದ್ದು ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನವರ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.
ವರದಿ: ಚಂದ್ರಮೌಳಿ ನಾಗಮಂಗಲ
More Stories
ಫೈಟರ್ ರವಿ ಸಾರಥ್ಯದಲ್ಲಿ ಹನುಮ ಮಾಲಾಧಾರಿಗಳು ಯಾತ್ರೆ
ಕಾಂತಾಪುರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಸಿ.ಕೆ.ರಮೇಶ್ ಕುಮಾರ ಆಯ್ಕೆ
ನಾಗಮಂಗಲದಲ್ಲಿ 75 ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಚೆಲುವರಾಯಸ್ವಾಮಿ ಸಾರಥ್ಯದಲ್ಲಿ ಪಾದಯಾತ್ರೆ